14
November, 2025

A News 365Times Venture

14
Friday
November, 2025

A News 365Times Venture

ರಾಷ್ಟ್ರೀಯ ಲೋಕ್ ಅದಾಲತ್‌  : ಒಟ್ಟು 7,268 ಬಾಕಿ  ಪ್ರಕರಣಗಳು ಇತ್ಯರ್ಥ.

Date:

 

ಮೈಸೂರು, ಮಾ.08,2025:  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ  ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಇಂದು ರಾಷ್ಟ್ರೀಯ ಲೋಕ್ ಅದಾಲತ್‌  ಹಮ್ಮಿಕೊಳ್ಳಲಾಗಿತ್ತು.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,22,125 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 61,193 ಸಿವಿಲ್ ಪ್ರಕರಣಗಳು ಹಾಗೂ 60,932 ಕ್ರಿಮಿನಲ್ ಪ್ರಕರಣಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ 37,816 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 21,646 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 7,268 ಪ್ರಕರಣಗಳನ್ನು ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.

ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 41 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾದರು.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟಾರೆಯಾಗಿ 7,268 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿರುತ್ತದೆ. ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು ರೂ.49,66,29,267/-ಗಳು  ಇತ್ಯರ್ಥವಾಗಿರುತ್ತದೆ. ಈ ಯಶಸ್ಸಿಗೆ ಸಹಕರಿಸಿ ಎಲ್ಲಾ ವಕೀಲರು  ಹಾಗೂ ಕಕ್ಷಿಗಾರರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

KEY WORDS: National Lok Adalat, Mysore, court, pending cases, disposed of.

National Lok Adalat: Total 7,268 pending cases disposed of.

The post ರಾಷ್ಟ್ರೀಯ ಲೋಕ್ ಅದಾಲತ್‌  : ಒಟ್ಟು 7,268 ಬಾಕಿ  ಪ್ರಕರಣಗಳು ಇತ್ಯರ್ಥ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...