30
July, 2026

A News 365Times Venture

30
Thursday
July, 2026

A News 365Times Venture

ಗೃಹಜ್ಯೋತಿ ಮಾಹಿತಿ ಸಂಗ್ರಹಣೆ ಕುರಿತು ವದಂತಿ: ಚಾವಿಸನಿನಿ(CESC) ಸ್ಪಷ್ಟನೆ

Date:

ಮೈಸೂರು, ಜುಲೈ, 29, 2026 (www.justkannada.in): ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ) ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹ ಕಾರ್ಯ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯುತ್ತಿದೆ.

ಈ ನಡುವೆ, ಫಲಾನುಭವಿಗಳ ಮಾಹಿತಿ ಸಂಗ್ರಹಣೆಗೆ ಜುಲೈ 31,2026 ಕೊನೆಯ ದಿನ ಎಂಬ ಬಗ್ಗೆ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ವದಂತಿ ಗ್ರಾಹಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಈ ಕುರಿತು ಚಾವಿಸನಿನಿ ಸ್ಪಷ್ಟನೆ ನೀಡಿದ್ದು, ಮಾಹಿತಿ ಸಂಗ್ರಹಣೆ ಹಾಗೂ ಅಗತ್ಯ ವಿವರಗಳನ್ನು ಸಲ್ಲಿಸಲು ಆಗಸ್ಟ್‌ 31, 2026ರವರೆಗೂ ಅವಕಾಶವಿದೆ.

ಆದ್ದರಿಂದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳು ಹಾಗೂ ವಿದ್ಯುತ್ ಗ್ರಾಹಕರು ಯಾವುದೇ ಆತಂಕ ಅಥವಾ ಗೊಂದಲಕ್ಕೆ ಒಳಗಾಗದೆ, ನಿಗದಿತ ಅವಧಿಯೊಳಗೆ ತಮ್ಮ ಮಾಹಿತಿಯನ್ನು ಸಲ್ಲಿಸಬಹುದು ಮತ್ತು ಇದಕ್ಕಾಗಿ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ ಎಂದು ಚಾವಿಸನಿನಿ ತಿಳಿಸಿದೆ.

ಚಾವಿಸನಿನಿಯ ಮೀಟರ್‌ ರೀಡರ್‌ ಅಥವಾ ನಿಯೋಜಿತ ಸಿಬ್ಬಂದಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗೆ ಮಾಹಿತಿ ಸಂಗ್ರಹಣೆಗೆ ಭೇಟಿ ನೀಡಲಿದ್ದು, ಗ್ರಾಹಕರು ಈ ಕೆಳಗಿನ ಅಗತ್ಯ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ಚಾವಿಸನಿನಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೃಹಜ್ಯೋತಿ ಮಾಹಿತಿ ಸಂಗ್ರಹಣೆಗೆ ನೀಡಬೇಕಾದ ದಾಖಲಾತಿಗಳ ವಿವರ:

  1. ಆಧಾರ್ ಕಾರ್ಡ್
  2. ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  3. ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
  4. ಪ್ಯಾನ್ ಕಾರ್ಡ್ (ಅನ್ವಯಿಸುವಲ್ಲಿ ಮಾತ್ರ)
  5. ಚಾಲ್ತಿಯಲ್ಲಿರುವ ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ)
  6. ರೇಷನ್ ಕಾರ್ಡ್(ಅನ್ವಯಿಸುವಲ್ಲಿ ಮಾತ್ರ)

Key words: Rumors, Grihajyoti, data collection, CESC,  clarifies

The post ಗೃಹಜ್ಯೋತಿ ಮಾಹಿತಿ ಸಂಗ್ರಹಣೆ ಕುರಿತು ವದಂತಿ: ಚಾವಿಸನಿನಿ(CESC) ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚೆನ್ನಮ್ಮರ 11ನೇ ದಿನದ ಕಾರ್ಯ:  ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ

ಹಾಸನ,ಜುಲೈ,30,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ...

ರಾಜ್ಯ ಗೃಹ ಇಲಾಖೆ ಕೇವಲ ಬಿಜೆಪಿಗರ ಭಾಷಣ ಹುಡುಕುವುದರಲ್ಲಿ ನಿರತ-ಶಾಸಕ ಸುನೀಲ್ ಕುಮಾರ್

ಶಿವಮೊಗ್ಗ,ಜುಲೈ,30,2026 (www.justkannada.in): ರಾಜ್ಯದ ಗೃಹ ಇಲಾಖೆ  ಡ್ರಗ್ಸ್ ದಂಧೆ ಕೊಲೆ ಸುಲಿಗೆ...

ಹೊಸ ವಿಧೇಯಕ ಕಣ್ಣೊರೆಸುವ ತಂತ್ರ: ಮೋದಿ, ಶಾ ಮೌನವೇಕೆ? ಖರ್ಗೆ ವಾಗ್ದಾಳಿ

ನವದೆಹಲಿ,ಜುಲೈ,30,2026 (www.justkannada.in):  ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026 ಕಣ್ಣೊರೆಸುವ...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA

ನವದೆಹಲಿ,ಜುಲೈ,30,2026 (www.justkannada.in) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್...