31
August, 2026

A News 365Times Venture

31
Monday
August, 2026

A News 365Times Venture

87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK

Date:

ಮಂಡ್ಯ,ಆಗಸ್ಟ್,29,2026 (www.justkannada.in): ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಬಿ. ನಾಗೇಂದ್ರ ರಾಜೀನಾಮೆ ಎಂದಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್ ಗೆ ಮುಜುಗರ ಆಗುತ್ತಿದೆ. 87 ಕೋಟಿ ಹಗರಣದ ಮುಜುಗರ ತಪ್ಪಿಸಲು ರಾಜೀನಾಮೆ ಕೊಟ್ಟಿದ್ದಾ?  ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಾಲೆಳೆದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ,   ಹೆಚ್ ಡಿಕೆ ಮೇಲೆ ಆರೋಪ ಇಲ್ವಾ ಎಂದು ನಾಗೇಂದ್ರ ಹೇಳಿದ್ದಾರೆ ನನ್ನ ಮೇಲೆ ಇರೋದು ರಾಜಕೀಯ ಆರೋಪ. ನಾನು ದುಡ್ಡು ಹೊಡೆದಿದ್ದೇನೆ ಎಂದು ಎಲ್ಲೂ ಇಲ್ಲ. 14 ವರ್ಷದಿಂದ ಆರೋಪವನ್ನ ಜೀವಂತ ಇಟ್ಟುಕೊಂಡಿದ್ದಾರೆ ನಾನು ಎರಡು ಬಾರಿ ಸಿಎಂ ಆಗಿದ್ದಾಗ ಮುಚ್ಚಿ ಹಾಕಬಹುದಿತ್ತು ಆರೋಪ ಮಾಡಿರೋರು ತನಿಖೆ ನಡೆಸಲು ಎಂದು ಬಿಟ್ಟಿದ್ದೇನೆ.  ಹಣ ಹೊಡೆದಿರುವ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದರು.

ಹಗರಣ ಮಾಡಿದ್ರೆ ರಾಜೀನಾಮೆ ನೀಡುತ್ತೇನೆ ಎಂಬ ಸಚಿವ ಬಾಲಕೃಷ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿ ಕುಮಾರಸ್ವಾಮಿ, ಸರ್ಕಾರ ಹಣ ಖರ್ಚು ಮಾಡಿ ಅಭಿವೃದ್ದಿ ಕಾರ್ಯಕ್ರಮ ಮಾಡಬೇಕಿತ್ತು.  ಆಗ 600 ಕೋಟಿ ಅವ್ಯವಹಾರ ಆಗಿದೆ ಎಂದು ಸಮಿತಿ ಮಾಡಿದರು.  ಅಭಿವೃದ್ದಿ ಹೆಸರಿನಲ್ಲಿ ಲೂಟಿ ಆಗಿದೆ ಎಂದು ಸಮಿತಿ ರಚಿಸಿದ್ದರು.  ಆದರೆ ಆ ಸದನ ಸಮಿತಿ ವರದಿ ಕೊಟ್ರಾ?  ಆ ವರದಿಯಲ್ಲಿ ಏನಿದೆ? ಬಹಳ ಜನ ರಾಜೀನಾಮೆ ಕೊಡುತ್ತೀನಿ ಅಂತೇಳಿ ಹೇಗಿದ್ದಾರೆ ನೋಡಿ ಎಂದು ಟಾಂಗ್ ಕೊಟ್ಟರು.

Key words: Nagendra, resigned, embarrassment, scam, Union Minister, HDK

The post 87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ – ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’- ಸಚಿವ ರಾಯರೆಡ್ಡಿ ಹೇಳಿಕೆಗೆ ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,31,2026 (www.justkannada.in):  ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಉನ್ನತ...

ರೈಲು ಡಿಕ್ಕಿಯಾಗಿ  ವೃದ್ಧೆ, ಮೊಮ್ಮಕ್ಕಳು ದುರ್ಮರಣ

ಬೆಂಗಳೂರು ಗ್ರಾಮಾಂತರ,ಆಗಸ್ಟ್,31,2026 (www.justkannada.in):  ರೈಲು ಡಿಕ್ಕಿಯಾಗಿ ವೃದ್ಧೆ ಮೊಮ್ಮಕ್ಕಳು ಸಾವನ್ನಲ್ಲಿರುವ ಘಟನೆ...

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ...

14 ವರ್ಷಗಳ ಹೋರಾಟದ ಬಳಿಕ ವಿಟಿಯುಗೆ ರೂ.700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿ ವಾಪಸ್

  ಬೆಂಗಳೂರು, Aug.30,2026: ಆದಾಯ ತೆರಿಗೆ (ಐ-ಟಿ) ಇಲಾಖೆಯೊಂದಿಗೆ 14 ವರ್ಷಗಳ ಸುದೀರ್ಘ...