ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.
ನಿನ್ನೆ ಸಂಜೆ ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇಂದು ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿರುವ ಸಿದ್ದರಾಮಯ್ಯ, ಬಾಕಿ ಉಳಿದ ಸಚಿವ ಸ್ಥಾನದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಅಹಿಂದ ವರ್ಗದ ಪರ ಗಮನ ಹರಿಸಿ ಅಹಿಂದ ವರ್ಗಕ್ಕೆ ಅವಕಾಶ ತಪ್ಪದಂತೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನಿಗಮ ಮಂಡಳಿ ಸ್ಥಾನ ಬಗ್ಗೆ ಚರ್ಚೆ, ಜಾತಿ ಗಣತಿ ಅನುಷ್ಠಾನ ಸಂಬಂಧ ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Key words: Former CM, Siddaramaiah, met, Congress leader, Rahul Gandhi.




