11
September, 2026

A News 365Times Venture

11
Friday
September, 2026

A News 365Times Venture

ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸದಲ್ಲಿ ಸಚಿವ ಎಂ.ಬಿ ಪಾಟೀಲ್ : ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆ

Date:

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಸೆಳೆಯುವ ಉದ್ದೇಶದಿಂದ ಫ್ರಾನ್ಸ್ ಮತ್ತು ನೆದರ್ಲೆಂಡ್ಸ್‌ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಸ್ಯಾಫ್ರಾನ್, ಎಲ್ ಎಫ್ ಬಿ, ನೆಕ್ಸ್ಪೀರಿಯಾ, ರಾಯಲ್ ಡಿ ಹ್ಯೂಸ್, ಎಸ್ಸಿಲಾರ್-ಲಕ್ಸೋಟಿಕ ಮುಂತಾದ‌ ಕಂಪನಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಜತೆಗೆ ಈ ಎಲ್ಲಾ ಕಂಪನಿಗಳನ್ನು ಮುಂದಿನ ವರ್ಷ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್  ಅವರು, ಏರೋಸ್ಪೇಸ್ ಕಂಪನಿಯಾಗಿರುವ ಸಾಫ್ರಾನ್ ಗೆ ರಾಜ್ಯದಲ್ಲಿ ಏವಿಯಾನಿಕ್ಸ್, ಬಾಹ್ಯಾಕಾಶ ವಿದ್ಯುನ್ಮಾನ ಮತ್ತಿತರ ಅಡ್ವಾನ್ಸ್ಡ್ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳಲ್ಲಿ ಬಂಡವಾಳ ಹೂಡಿಕೆಯನ್ನು ಪರಿಗಣಿಸುವಂತೆ ಕೋರಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಕಂಪನಿಯ ಪ್ರತಿನಿಧಿಗಳು, 2025ರ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿದ್ದ ಒಡಂಬಡಿಕೆಯಂತೆ ಬೆಂಗಳೂರಿನಲ್ಲಿ 12 ಸಾವಿರ ಚದರ ಮೀಟರ್ ವಿಸ್ತಾರದ ಎಲೆಕ್ಟ್ರಾನಿಕ್ ಉತ್ಪಾದನಾ ಘಟಕ ಮತ್ತು ಕಲ್ಯಾಣಿ ಟೆಕ್ ಪಾರ್ಕ್ ನಲ್ಲಿ 3,000 ಚ.ಮೀ. ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳ ನಿರ್ಮಾಣ ಮುಕ್ತಾಯದ ಹಂತಕ್ಕೆ ಬಂದಿರುವುದಾಗಿ ತಿಳಿಸಿದರು.

ಎಸ್ಸಿಲಾರ್-ಲಕ್ಸೋಟಿಕ ಕಂಪನಿಯು ಕನ್ನಡಕ ಮತ್ತು ಮೆಡ್-ಟೆಕ್ ವಲಯಗಳಲ್ಲಿ ಹೆಸರು ಮಾಡಿದೆ. ರಾಜ್ಯದಲ್ಲಿ ಅಡ್ವಾನ್ಸಡ್ ಲೆನ್ಸ್ ತಯಾರಿಕೆಯನ್ನು ಪರಿಗಣಿಸುವಂತೆ ಕಂಪನಿಗೆ ಕೋರಲಾಗಿದೆ. ಇದೇ ರೀತಿಯಲ್ಲಿ ಡಚ್ ಹೈನುಗಾರಿಕೆ ಕಂಪನಿಯಾದ ಡೇ ಹ್ಯೂಸ್ ರಾಜ್ಯದ ಹಾಲು ಮಹಾಮಂಡಳಿ ಜತೆ ಸಹಭಾಗಿತ್ವ ಹೊಂದಲು ಒಲವು ವ್ಯಕ್ತಪಡಿಸಿದೆ ಎಂದು ಅವರು ವಿವರಿಸಿದ್ದಾರೆ.

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ನೆಕ್ಸ್ ಪೀರಿಯಾ ಕಂಪನಿಗೆ ರಾಜ್ಯದಲ್ಲಿ ಎಟಿಎಂಪಿ (ಅಸೆಂಬ್ಲಿ, ಟೆಸ್ಟಿಂಗ್, ಮಾರ್ಕಿಂಗ್ ಮತ್ತು ಪ್ಯಾಕಿಂಗ್) ಸ್ಥಾವರ ಸ್ಥಾಪನೆಗೆ ಮುಂದಾಗುವಂತೆ ಪ್ರಸ್ತಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾತುಕತೆಯಲ್ಲಿ ನೆಕ್ಸ್ ಪೀರಿಯಾ ಕಂಪನಿಯ ಹಿರಿಯ ನಿರ್ದೇಶಕ ಹೇನ್ಸ್ ವ್ಯಾನ್ ರೆಮ್ಡೋಂಕ್, ಡೇ ಹ್ಯೂಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಟ್ಜರ್ ಔಡ್ಜೆನಸ್, ಎಸ್ಸಿಲಾರ್-ಲಕ್ಸೋಟಿಕ ಕಂಪನಿಯ ಸಿಇಒ ಪಾಲ್ ಡು ಸೈಲಾಂಟ್, ವೇಣು ಅಂಬಟಿ, ಸಾಫ್ರಾನ್ ಕಂಪನಿಯ ಸಿಇಒ ಫ್ರಾಂಕ್ ಸೌದೊ, ಅಲೆಕ್ಸಾಂಡರ್ ಡೆರ್ವಾಕ್ಸ್ ಮುಂತಾದವರು ಭಾಗವಹಿಸಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಖುಷ್ಬು ಗೋಯಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು...

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,ಸೆಪ್ಟಂಬರ್, 10,2026 (www.justkannada.in):  ತನ್ನ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ...

 ಮೈಸೂರು: ವೃದ್ಧೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ

ಮೈಸೂರು, ಸೆಪ್ಟಂಬರ್,10, 2026 (www.justkannada.in):  ಮೈಸೂರಿನಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಸಿಯಲು...

ನಿವೇಶನ ರಹಿತರಿಗೆ ಸೈಟ್, ಉದ್ಯೋಗಸೃಷ್ಠಿ, ರೈತರಿಗೆ ನೇಗಿಲಯೋಗಿ ಯೋಜನೆ- ಸಿಎಂ ಡಿಕೆಶಿ ಘೋಷಣೆ

ಬೆಂಗಳೂರು,ಸೆಪ್ಟಂಬರ್,10,2026 (www.justkannada.in): ನಿವೇಶನ ರಹಿತ ಕುಟುಂಬಗಳಿಗೆ ಗೆ ಸೈಟ್ ನೀಡಲು ನಿರ್ಧರಿಸಿದ್ದೇವೆ....