20
September, 2026

A News 365Times Venture

20
Sunday
September, 2026

A News 365Times Venture

ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ

Date:

ಶಿವಮೊಗ್ಗ, ಸೆಪ್ಟಂಬರ್‌, 19,2026 (www.justkannada.in) “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ತತ್ವ.‌ ಸಹಕಾರ ಪದ್ದತಿಯಿಂದ ರೈತರ ಪ್ರಗತಿ ಸಾಧ್ಯವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಅಮೃತ ಮಹೋತ್ಸವವನ್ನು ಶನಿವಾರ ಉದ್ಘಾಟಿಸಿ  ಸಿಎಂ ಡಿಕೆ ಶಿವಕುಮಾರ್‌ ಮಾತನಾಡಿದರು.

“ನನಗೂ ಸಹಕಾರಿ ಚಳುವಳಿಗೂ ಅವಿನಾಭಾವ ಸಂಬಂಧ. ರಾಮಕೃಷ್ಣ ಹೆಗಡೆ ಅವರು 1983ರಲ್ಲಿ ಕನಕಪುರ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು. ಆಗ ನನಗೆ 22 ವರ್ಷ. ಆಗ ನಾನೂ ಟಿಎಪಿಸಿಎಂಸ್ ಚುನಾವಣೆಗೆ ಸಾಮಾನ್ಯ ಕ್ಷೇತ್ರದಿಂದ ನಿಂತು ಗೆದ್ದಿದ್ದೆ.‌ ಆದರೂ ನಾನು ಟಿಎಪಿಸಿಎಂಎಸ್ ಕಾರ್ಯಕ್ರಮಕ್ಕೆ ಹೋದವನಲ್ಲ. ಶಾಸಕರಾದ ಅರಗ ಜ್ಞಾನೇಂದ್ರ ಅವರ ಒತ್ತಾಯದ ಮೇರೆಗೆ ಇಲ್ಲಿದೆ ಬಂದೆ” ಎಂದರು.

“ಕಬ್ಬಿನ ಕಾರ್ಖಾನೆಗಳು ಸಹಕಾರಿ ಪದ್ದತಿಯಲ್ಲಿ ‌ನಡೆದು ರೈತರನ್ನು ಕಾಪಾಡಿವೆ. ಮಲೆನಾಡು ಭಾಗದಲ್ಲಿ ಬಸ್, ಆಸ್ಪತ್ರೆ, ಬ್ಯಾಂಕ್ ಗಳು ಸಹಕಾರಿ ಪದ್ದತಿಯಲ್ಲಿ ನಡೆಯುತ್ತಿವೆ. ಇದು ಈ ಭಾಗದ ಹೆಗ್ಗಳಿಕೆ. ಟಿಎಪಿಸಿಎಂಎಸ್ 75 ವರ್ಷ ಆಚರಿಸುತ್ತಿದೆ. ಒಂದು ಸಂಸ್ಥೆ ಇಷ್ಟು ವರ್ಷಗಳ ಕಾಲ ಉಳಿಯುವುದು ಕಷ್ಟ.‌ ಅದನ್ನು ತೀರ್ಥಹಳ್ಳಿ ಟಿಎಪಿಸಿಎಂಎಸ್ ಸುಳ್ಳಾಗಿಸಿದೆ.‌ ಇಲ್ಲಿನ ಆಡಳಿತ ಮಂಡಳಿಗೆ ಅಭಿನಂದನೆಗಳು” ಎಂದರು.

“ಮಲೆನಾಡು ಭಾಗಕ್ಕೆ ಹೊಸ ಪ್ರವಾಸೋದ್ಯಮ ನೀತಿ, ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಎಂದು ಘೋಷಣೆ ಮಾಡಲಾಗಿದೆ. ಹೀಗೆ ಅನೇಕ ಐಸಿಹಾಸಿಕ ನಿರ್ಣಯಗಳನ್ನು ಕರಾವಳಿ ಭಾಗದಲ್ಲಿ ಸಚಿವ ಸಂಪುಟ ನಡೆಸಿ ನಮ್ಮ‌ ಸರ್ಕಾರ ತೆಗೆದುಕೊಂಡಿದೆ. ಮಲೆನಾಡು ಭಾಗವನ್ನು ಉಳಿಸುವ ಬಗ್ಗೆ ಜನರ ಅಭಿಪ್ರಾಯ ಪಡೆದು ತೀರ್ಮಾನ, ಚರ್ಚೆ ಮಾಡೋಣ” ಎಂದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 “Save Hindu Temples” ಉಪಕ್ರಮಕ್ಕೆ ಸಂಸದ ಯದುವೀರ್ ಒಡೆಯರ್ ಚಾಲನೆ

ಮೈಸೂರು, ಸೆಪ್ಟೆಂಬರ್, 19, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...

ರೋಜ್‌ ಗಾರ್ ಮೇಳ ಯುವಶಕ್ತಿಗೆ ಹೊಸ ಅವಕಾಶಗಳ ಸಂಕೇತ: ಉದ್ಯೋಗ ಸೃಷ್ಟಿಗೆ ಒತ್ತು-ಕೇಂದ್ರ ಸಚಿವ ವಿ ಸೋಮಣ್ಣ

ಮೈಸೂರು ಸೆಪ್ಟೆಂಬರ್, 19,2026 (www.justkannada.in): ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಯುವಜನತೆ ಪ್ರಮುಖ...

ಕಸ್ತೂರಿ ರಂಗನ್‌ ವರದಿಯ ಆತಂಕಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ,ಸೆಪ್ಟೆಂಬರ್ 19,2026 (www.justkannada.in) ರಾಜ್ಯ ಸರ್ಕಾರ  ಸ್ಪರ್ಷವಾಗಿ ಕಸ್ತೂರಿ ರಂಗನ್ ವರದಿಯನ್ನು...

ಸೆಮಿಕಾನ್ ಇಂಡಿಯಾ-2026 ಸಮಾವೇಶ: ರಾಜ್ಯಕ್ಕೆ 15 ಸಾವಿರ ಕೋಟಿ ರೂ. ಬಂಡವಾಳ ಹರಿವು ನಿಚ್ಚಳ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಸೆಪ್ಟಂಬರ್‌,19,2026 (www.justkannada.in): ದೆಹಲಿಯಲ್ಲಿ ನಡೆದ ಸೆಮಿಕಾನ್ ಇಂಡಿಯಾ-2026 ಸಮಾವೇಶದಲ್ಲಿ 20ಕ್ಕೂ ಹೆಚ್ಚು...