25
August, 2026

A News 365Times Venture

25
Tuesday
August, 2026

A News 365Times Venture

ಪಿಯು ಫಲಿತಾಂಶ : ಸೈನ್ಸ್‌, ಆರ್ಟ್ಸ್‌, ಕಾಮರ್ಸ್‌ ಮೂರರಲ್ಲೂ ಹೆಣ್ಮಕ್ಕಳೇ ಟಾಪರ್ಸ್..!‌

Date:

ಬೆಂಗಳೂರು, ಏ.೦೮,೨೦೨೫ : ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಹೆಣ್ಮಕ್ಕಳೆ ಟಾಪರ್ಸ್‌ .  ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ಮೇಲುಗೈ ಸಾಧಿಸುವ ಮೂಲಕ ವಿದ್ಯಾರ್ಥಿನಿಯರು ದಾಖಲೆ ಬರೆದಿದ್ದಾರೆ.

ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ  ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ  597 ಅಂಕ ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ವಾಣಿಜ್ಯ ವಿಭಾಗದಲ್ಲಿ ಟಾಪರ್​ ಆಗಿದ್ದಾರೆ.

ಉಡುಪಿ ಫಸ್ಟ್​- ಯಾದಗಿರಿ ಲಾಸ್ಟ್​:

ರಾಜ್ಯದಲ್ಲಿ ಉಡುಪಿ ಜಿಲ್ಲೆ 93.90 ಫಲಿತಾಂಶ ಹೊಂದುವ ಮೂಲಕ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಶೇ.48.45 ಫಲಿತಾಂಶ ತನ್ನದಾಗಿಸಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.53, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ಼್ಞಾನ ವಿಭಾಗದಲ್ಲಿ ಶೇ.82ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

key words: PU results, Girl’s topper, Karnataka

PU results: Girl’s topper in science, arts and commerce

The post ಪಿಯು ಫಲಿತಾಂಶ : ಸೈನ್ಸ್‌, ಆರ್ಟ್ಸ್‌, ಕಾಮರ್ಸ್‌ ಮೂರರಲ್ಲೂ ಹೆಣ್ಮಕ್ಕಳೇ ಟಾಪರ್ಸ್..!‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...