24
August, 2026

A News 365Times Venture

24
Monday
August, 2026

A News 365Times Venture

ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in):  ಡೀಸೆಲ್ ಬೆಲೆ ಇಳಿಕೆ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಹೂಡಿರುವ ಮುಷ್ಕರ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ 3ನೇ ಸುತ್ತಿನ ಸಭೆಗೆ ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಂಘದ ಜೊತೆ ವಿಧಾನಸೌಧದಲ್ಲಿ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸಲಿದ್ದಾರೆ.  ಈಗಾಗಲೇ ಸಚಿವ ರಾಮಲಿಂಗರೆಡ್ಡಿ ಲಾರಿ ಮಾಲೀಕರ ಸಂಘದ ಜೊತೆ ಮೊದಲ ಸುತ್ತಿನ ಸಭೆ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ 2ನೇ ಸುತ್ತಿನ ಸಭೆ ನಡೆಸಿದ್ದರು. ಈ ಸಭೆಗಳು ವಿಫಲವಾಗಿದ್ದವು.

ನಂತರ ಲಾರಿ ಮಾಲೀಕರ ಸಂಘದ ಮುಷ್ಕರ ಮುಂದುವರೆದಿತ್ತು. ಇದೀಗ ಮತ್ತೆ ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗರೆಡ್ಡಿ ಸಭೆಗೆ ಮುಂದಾಗಿದ್ದಾರೆ.   ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಭೆ ನಿಗದಿಯಾಗಿತ್ತು. ಎಲ್ಲಾ ಜಿಲ್ಲಾಧ್ಯಕ್ಷರನ್ನ ಕರೆದು ಸಭೆ ಮೂಲಕ ಮುಷ್ಕರವನ್ನ ತೀವ್ರಗೊಳಿಸಲು ಪ್ಲಾನ್ ಮಾಡಲಾಗಿತ್ತು. ಅದರೆ ಇದೀಗ ಸಚಿವರೇ ಸಭೆ ನಡೆಸಲು ಮುಂದಾಗಿದ್ದು ಈ ಹಿನ್ನೆಲೆ ಲಾರಿ ಮಾಲೀಕರ ಸಭೆ ರದ್ದಾಗಿದೆ.

Key words: Lorry owners, strike,  Minister, Ramalingareddy, meeting

The post ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...