28
August, 2026

A News 365Times Venture

28
Friday
August, 2026

A News 365Times Venture

ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ

Date:

ಬೆಂಗಳೂರು,ಏಪ್ರಿಲ್,19,2025 (www.justkannada.in):  ಬೀದರ್ ಮತ್ತು ಶಿವಮೊಗ್ಗದಲ್ಲಿ  ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಯನ್ನ ಖಂಡಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಎಂದು ಕಿಡಿಕಾರಿದರು.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ತಪ್ಪು.   ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರು.

ಹಾಗೆಯೇ ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ಜರುಗಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ  ಆಗ್ರಹಿಸಿದರು.

Key words: CET Exam, Janivara, JDS Leader, Nikhil Kumaraswamy

 

The post ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...