30
July, 2025

A News 365Times Venture

30
Wednesday
July, 2025

A News 365Times Venture

ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು ಏಪ್ರಿಲ್, 21,2025 (www.justkannada.in):  ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ  ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು.

ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು  ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ತಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.

ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

Key words: State Government Employees Day , honest, CM Siddaramaiah

The post ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...