4
March, 2026

A News 365Times Venture

4
Wednesday
March, 2026

A News 365Times Venture

ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಪಾರ್ಥಿವ ಶರೀರ ತವರಿಗೆ: ಅಂತಿಮ ನಮನ ಸಲ್ಲಿಸಿದ ಸಿಎಂ

Date:

ಬೆಂಗಳೂರು,ಏಪ್ರಿಲ್,24,2025 (www.justkannada.in): ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಇಬ್ಬರು ಕನ್ನಡಿಗರಾದ ಮಂಜುನಾಥ್, ಭರತ್ ಭೂಷಣ್ ಅವರ ಪಾರ್ಥಿವ ಶರೀರ ಈಗಾಗಲೇ ತಮ್ಮ ಸ್ವಗ್ರಾಮ ತಲುಪಿದೆ.

ಇಂದು ಮುಂಜಾನೆ 3.45 ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಇಬ್ಬರ ಪಾರ್ಥಿವ ಶರೀರ ಬಂದಿದ್ದು ನಂತರ ಬೆಂಗಳೂರಿನ ಮತ್ತಿಕೆರೆ ನಿವಾಸಕ್ಕೆ  ಭರತ್ ಭೂಷಣ್ ಅವರ  ಪಾರ್ಥಿವ ಶರೀರ ಕೊಂಡೊಯ್ಯಲಾಯಿತು. ಹಾಗೆಯೇ  ಮಂಜುನಾಥ್  ಅವರ ಪಾರ್ಥಿವ ಶರೀರವನ್ನ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮತ್ತೀಕೆರೆಗೆ ತೆರಳಿ ಭರತ್ ಭೂಷಣ್ ಅವರ  ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಘಟನೆ ನಡೆದ ನಂತರ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಿ ವರ್ಗ ಕಾಶ್ಮೀರಕ್ಕೆ ತೆರಳಿತ್ತು. ಸರ್ಕಾರ ಮೃತ ದೇಹಗಳನ್ನು  ತರಲು ಎಲ್ಲಾ ವ್ಯವಸ್ಥೆ ಕಲ್ಪಿಸಿತ್ತು.  ರಾಜ್ಯದಿಂದ ಕಾಶ್ಮೀರ ಪ್ರವಾಸದಲ್ಲಿದ್ದ ಸುಮಾರು 180 ಮಂದಿ. ಈಗಾಗಲೇ 167 ಮಂದಿ ಸಂಪರ್ಕ ಮಾಡಿದ ಸಚಿವ ಸಂತೋಷ್ ಲಾಡ್. ಎಲ್ಲರೂ ಸುರಕ್ಷಿತವಾಗಿದ್ದು ಎಲ್ಲರನ್ನ ವಾಪಸ್ ಕರೆತರುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.

Key words: Terrorist attack, two Kannadigas, Bodies, hometown

The post ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಪಾರ್ಥಿವ ಶರೀರ ತವರಿಗೆ: ಅಂತಿಮ ನಮನ ಸಲ್ಲಿಸಿದ ಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...