30
April, 2026

A News 365Times Venture

30
Thursday
April, 2026

A News 365Times Venture

ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಂಪುಟ ಸಭೆ: ವಿಶೇಷ ಪ್ಯಾಕೇಜ್ ಘೋಷಣೆ ನಿರೀಕ್ಷೆ

Date:

ಚಾಮರಾಜನಗರ ಏಪ್ರಿಲ್,24,2025 (www.justkannada.in): ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆ ಇದೆ.

ಮಹದೇವಶ್ವರ ಬೆಟ್ಟದ ಜೇನುಮಲೆ ಭವನದ ಮುಂಭಾಗ ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಗಡಿ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಸಭೆಯಲ್ಲಿ ನೆರೆಯ ಮೈಸೂರು, ಮಂಡ್ಯ, ಹಾಸನ ಪ್ರದೇಶದ ಪ್ರಗತಿಗೆ ಸಂಬಂಧಿಸಿದ ಯೋಜನೆಗಳು  ಘೋಷಣೆಯಾಗುವ ನಿರೀಕ್ಷೆ ಇದೆ. ಚಾಮರಾಜನಗರ ಮೈಸೂರು ಜಿಲ್ಲೆಯಿಂದ 1997 ರಲ್ಲಿ ಬೇರ್ಪಟ್ಟಿತ್ತು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿದ್ದು, ಜಿಲ್ಲೆಗೆ ಸಂಪುಟ ಸಭೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆ ಇದೆ.

ಎಸ್.ಎಂ ಕೃಷ್ಣ ಸಿಎಂ ಆಗಿದ್ದ ವೇಳೆ  ವಿಶೇಷ ಸಂಪುಟ ಸಭೆ ಬಿಳಿಗಿರಿ ರಂಗನ ಬೆಟ್ಟದಲ್ಲಿ ನಡೆದಿತ್ತು. ಅದಾದ ಬಳಿಕ ಮಾದಪ್ಪನ ಸನ್ನಿಧಿಯಲ್ಲಿ ಜರುಗುತ್ತಿರುವ ಎರಡನೇ ಸಂಪುಟ ಸಭೆ ಇದಾಗಿದೆ.

ಜಿಲ್ಲೆಯ ಒಳಚರಂಡಿ, ರಸ್ತೆ ಅಭಿವೃದ್ಧಿ, ನೀರಾವರಿ ಯೋಜನೆಗಳು, ಬುಡಕಟ್ಟು ಸಮುದಾಯಗಳ ವಸತಿ,ಹಾಡಿಗಳಿಗೆ ರಸ್ತೆ, ವಿದ್ಯುತ್ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಬೇಕಾಗಿರುವ ಯೋಜನೆಗಳ ಬಗ್ಗೆ   ಜಿಲ್ಲಾಡಳಿತ ಪ್ರಸ್ತಾಪ ಸಲ್ಲಿಸಿದೆ.

ಸಚಿವ ಸಂಪುಟ ಸಭೆಗೆ  ಈಗಾಗಲೇ ಕೆಲ ಸಚಿವರು ರಾತ್ರಿಯೇ ಬಂದು ವಾಸ್ತವ್ಯ ಹೂಡಿದ್ದು  ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರ ಆಗಮಿಸಲಿದ್ದಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಸ್ವಾಗತಕ್ಕೆ ಮಾದಪ್ಪನ‌ ಬೆಟ್ಟ ಮಧುವಣಗಿತ್ತಿಯಂತೆ  ಕಂಗೊಳಿಸುತ್ತಿದ್ದು, ಮಹದೇಶ್ವರ ಬೆಟ್ಟದಲ್ಲಿ ಭಾರಿ ಪೋಲಿಸ್ ಭದ್ರತೆ ನಿಯೋಜಿಸಲಾಗಿದೆ.

ಮಾದಪ್ಪನ‌ ಚರಿತ್ರೆಯುಳ್ಳ ಮ್ಯೂಸಿಯಂ, ವಜ್ರಮಲೆ ಭವನ, ಸಮಗ್ರ ಒಳಚರಂಡಿ ಯೋಜನೆ, ಸೋಲಾರ್ ಸೌರಶಕ್ತಿ ಘಟಕ, ದೊಡ್ಡಕೆರೆ ಜೀರ್ಣೋದ್ಧಾರ ಕಾಮಗಾರಿ, ಸಿಸಿ ರಸ್ತೆ ಕಾಮಗಾರಿ ಸೇರಿದಂತೆ ಹತ್ತಾರು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನ ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

Key words: Historic, cabinet, meeting, Male Mahadeshwara Hill, today

The post ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಂಪುಟ ಸಭೆ: ವಿಶೇಷ ಪ್ಯಾಕೇಜ್ ಘೋಷಣೆ ನಿರೀಕ್ಷೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...