11
March, 2026

A News 365Times Venture

11
Wednesday
March, 2026

A News 365Times Venture

ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ

Date:

ಬೆಂಗಳೂರು, ಏಪ್ರಿಲ್​ 26,2025 (www.justkannada.in):  ಸಿಇಟಿ ಪರೀಕ್ಷೆ  ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮರು ಪರೀಕ್ಷೆಗೆ ಮನವಿ ಮಾಡಿದೆ.

ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಸಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬಳಿಕ  ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್‌ 16 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್‌ ನಲ್ಲಿ ಜನಿವಾರ ತೆಗೆಯೋದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Key words: Janivara Case, PIL, High Court

The post ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...