4
May, 2026

A News 365Times Venture

4
Monday
May, 2026

A News 365Times Venture

ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಪರಾಧಿ : 7 ವರ್ಷ ಜೈಲುಶಿಕ್ಷೆ ಪ್ರಕಟ

Date:

ನವದೆಹಲಿ,ಮೇ,6,2025 (www.justkannada.in): ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಪ್ರಸ್ತುತ ಗಂಗಾವತಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಅಪರಾಧಿ  ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಬಿಎಸ್ ಯಡಿಯೂರಪ್ಪ ಆಡಳಿತದಲ್ಲಿ ಈ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಓಎಂಸಿ ಕಂಪನಿಯ ಎಂಡಿಯಾಗಿದ್ದರು.

ಈ ಕಂಪನಿಗೆ ಗಣಿಗಾರಿ ಮಂಜೂರಾತಿ ನೀಡುವಲ್ಲಿ ಅಕ್ರಮ ನಡೆದಿತ್ತು. ಅರಣ್ಯ ಇಲಾಖೆ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಮಾಜಿ ಸಚಿವ ಜನಾರ್ಧನರೆಡ್ಡಿ ಅಪರಾಧಿ ಎಂದು ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು ಇದೀಗ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗಿದ್ದಾರೆ.

ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು ಅಲಿ ಖಾನ್‌ಗೆ ಕೋರ್ಟ್‌ ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್‌ ಕ್ಲೀನ್‌ ಚಿಟ್‌ ನೀಡಿದೆ.

Key words: Former minister, Janardhana Reddy, convicted , illegal mining case

The post ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಪರಾಧಿ : 7 ವರ್ಷ ಜೈಲುಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...