5
April, 2026

A News 365Times Venture

5
Sunday
April, 2026

A News 365Times Venture

ಫೆ.1 ಮತ್ತು 2 ರಂದು ಪರಿದೃಶ್ಯ ಚಿತ್ರೋತ್ಸವ: ಪೋಸ್ಟರ್ ಬಿಡುಗಡೆ

Date:

ಮೈಸೂರು,ಜನವರಿ,27,2025 (www.justkannada.in): ಮೈಸೂರು ಸಿನಿಮಾ ಸೊಸೈಟಿ ಮತ್ತು ಭಾರತೀಯ ಚಿತ್ರ ಸಾಧನದ ಸಹಯೋಗದೊಂದಿಗೆ ಫೆಬ್ರವರಿ 1ಮತ್ತು 2ರಂದು ಪರಿದೃಶ್ಯ ಚಿತ್ರೋತ್ಸವ ಕಾರ್ಯಕ್ರಮವನ್ನಆಯೋಜಿಸಲಾಗಿದೆ.

ನಗರದ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ನಟ, ನಿರ್ದೇಶಕ  ಪ್ರಕಾಶ್ ಬೆಳವಾಡಿ, ಬರಹಗಾರ ಮನೇಕ್ ಪ್ರೇಮಚಂದ್ ಮತ್ತು  ಕೆಎಸ್ ಒಯು ಕುಲಪತಿ ಶರಣಪ್ಪ ಹಲಸೆ ಉದ್ಘಾಟಿಸಲಿದ್ದಾರೆ.  ಪೃಥ್ವಿ ಕೊಣನೂರ್, ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀ ವತ್ಸ,ಹಾಗೂ ಇನ್ನಿತರ ಶಾಸಕರು ಉಪಸ್ಥಿತರಿರಲಿದ್ದಾರೆ.

ಪರಿದೃಶ್ಯ ಚಿತ್ರೋತ್ಸವಕ್ಕೆ ಪ್ರಪಂಚದಾದ್ಯಂತ 109 ದೇಶಗಳಿಂದ 3123 ಕಿರು ಮತ್ತು ಸಾಕ್ಷ್ಯಚಿತ್ರಗಳು ಬಂದಿವೆ. ಈ ಚಿತ್ರಗಳಲ್ಲಿ ಆಯ್ಕೆಯಾದ ಸಿನಿಮಾಗಳಿಗೆ 26 ವರ್ಗಗಳ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಭಾರತದಿಂದ 985, ಇರಾನ್, 42,  ಫ್ರಾನ್ಸ್ 138, ಇಟಲಿ 5, ಜರ್ಮನಿ 137, ರಷ್ಯಾದಿಂದ 108 ಸೇರಿ 3123 ಸಿನಿಮಾಗಳು ಬಂದಿವೆ.  ಕನ್ನಡದ ಒಟ್ಟು 73 ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಸೇರಿವೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೇಂದ್ರ ಸಚಿವ ಡಾ.ಎಲ್ ಮುರುಗನ್ ಅವರು ಉಪಸ್ಥಿತರಿರಲಿದ್ದಾರೆ. ಈ ಕುರಿತ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಮೈಸೂರು ಸಿನಿಮಾ ಸೊಸೈಟಿ ಕಾರ್ಯದರ್ಶಿ ಪದ್ಮವಾತಿ ಭಟ್, ಸಂಯೋಜಕ ಚೇತನ ಜಿ.ಅರ್,  ಸದಸ್ಯರುಗಳಾದ ಜೋಗಿ ಮಂಜು, ಸೀಮಾ ಬುರುಡೆ, ವೇಣುಗೋಪಾಲ್ ಇದ್ದರು.

Key words: Paridrishya Film Festival, mysore, Feb 1, Poster, release

The post ಫೆ.1 ಮತ್ತು 2 ರಂದು ಪರಿದೃಶ್ಯ ಚಿತ್ರೋತ್ಸವ: ಪೋಸ್ಟರ್ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...