26
August, 2026

A News 365Times Venture

26
Wednesday
August, 2026

A News 365Times Venture

ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ

Date:

ನವದೆಹಲಿ,ಮೇ,7,2025 (www.justkannada.in):  ಪೆಹಲ್ಗಾಮ್​ ಉಗ್ರರ ದಾಳಿಯ ಪ್ರತೀಕಾರಕ್ಕೆ  ನಿನ್ನೆ ತಡರಾತ್ರಿ ಭಾರತೀಯ ಸೇನೆ ಉಗ್ರರ 9 ನೆಲೆಗಳ ಮೇಲೆ ದಾಳಿ ಕ್ಷಿಪಣಿ ದಾಳಿ ನಡೆಸಿ   ಉಗ್ರರ ನೆಲೆಯನ್ನ ಧ್ವಂಸ ಮಾಡಿದ್ದು, ಈ ಅಪರೇಷನ್ ಸಿಂಧೂರಕ್ಕೆ  ಬೆದರಿದ ಪಾಕಿಸ್ತಾನ ಇದೀಗ ಶಾಂತಿ ಮಂತ್ರ ಜಪಿಸಿದಂತಿದೆ.

ಹೌದು  ಆಪರೇಷನ್ ಸಿಂಧೂರ್ ​​ ಬೆನ್ನಲ್ಲೇ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ  ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್​ ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯೆ ನೀಡುತ್ತದೆ . ನಾವು ಭಾರತದ ವಿರುದ್ಧ ಯಾವುದೇ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ. ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧರಿದ್ದೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ದೇಶದಾದ್ಯಂತ  ಮಾಕ್ ಡ್ರಿಲ್ (ಅಣಕುಪ್ರದರ್ಶನ ) ನಡೆಯುತ್ತಿದ್ದು ಈ ಪ್ರಯುಕ್ತ ಯುದ್ಧದ ಸೈರನ್ ಮೊಳಗಿತು. ಏನಾದರು ಪಾಕಿಸ್ತಾನ್ ಭಾರತದ ಮೇಲೆ ದಾಳಿ ಮಾಡಿದರೆ ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಕುರಿತು ಅಣುಕು ಪ್ರದರ್ಶನ  ಇದಾಗಿದೆ.

Key words: Operation Sindhura, Pakistan, threatened

The post ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...