29
July, 2026

A News 365Times Venture

29
Wednesday
July, 2026

A News 365Times Venture

ಕ್ಯಾತಮಾರನಹಳ್ಳಿ ಮಸೀದಿ ವಿವಾದ: ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ

Date:

ಮೈಸೂರು,ಮೇ,8,2025 (www.justkannada.in): ಮೈಸೂರಿನ ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈ ಕೋರ್ಟ್ ತಡೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಕುರಿತು  ಮಾಹಿತಿ ಹಂಚಿಕೊಂಡಿರುವ ವಕೀಲ ಅ.ಮ ಭಾಸ್ಕರ್ , ಈಗಾಗಲೇ ವಿವಾದಿತ ಜಾಗದ ವಿಚಾರಕ್ಕೆ ಕೊಲೆ ಆಗಿದೆ. ಅಲ್ಲದೆ ಮದರಸಾ ಮಾಡಲು ಸ್ಥಳೀಯರ ವಿರೋಧವಿದೆ. ವಿವಾದಿತ ಜಾಗ ರೇಸಿಡೆನ್ಸಿಯಲ್ ಆಗಿದ್ದು, ಅಲ್ಲಿ ನರ್ಸರಿ ಅರೇಬಿಕ್ ಶಾಲೆ ತೆರೆಯಲು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿದ್ದರು. ಸದ್ಯ ಹೈಕೋರ್ಟ್ ಡಿಸಿ ಅವರ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ ಎಂದು ತಿಳಿಸಿದರು.

ಸಂತಸ ಹಂಚಿಕೊಂಡ ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರು

ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೆ ಸಂತಸ ಹಂಚಿಕೊಂಡ ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರು, ವಿವಾದಿತ ಸ್ಥಳದಲ್ಲಿ ಮದರಸ ನಡೆಸದಂತೆ ಹೈಕೋರ್ಟ್ ತಡೆ ನೀಡಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗಲು ಸೂಚನೆ ನೀಡಿದೆ. ಇದು ನಮಗೆ ಮೊದಲ ಹಂತದ ಜಯ. ಯಾವುದೇ ಕಾರಣಕ್ಕೂ ಅಲ್ಲಿ ಮದರಸ ತೆರೆಯಬಾರದು. ಈಗಾಗಲೇ ಅದು ಸೂಕ್ಷ್ಮ ಪ್ರದೇಶವಾಗಿದೆ. ಕೋರ್ಟ್ ಆದೇಶವನ್ನ ನಾವು ಗೌರವಿಸುತ್ತೇವೆ  ಮತ್ತು ಪಾಲಿಸುತ್ತೇವೆ. ಮುಂದೆ ಏನಾಗುತ್ತದೋ ಅದಕ್ಕೆ ನಮ್ಮ ವಕೀಲರಿದ್ದಾರೆ. ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.

Key words: Kyathamaranahalli, Mosque, controversy, High Court, stays, Mysore DC, order

The post ಕ್ಯಾತಮಾರನಹಳ್ಳಿ ಮಸೀದಿ ವಿವಾದ: ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ...

ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,29,2026 (www.justkannada.in):   ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ  ಕೇಂದ್ರ ಶಿಕ್ಷಣ ಸಚಿವ...

ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ

ಶಿವಮೊಗ್ಗ,ಜುಲೈ,29,2026 (www.justkannada.in): ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು...

ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

ಬೆಂಗಳೂರು,ಜುಲೈ,29,2026 (www.justkannada.in): ಕಳೆದ ವಾರ ಇಳೆಗಿಳಿದಿಹ ಬೆಳದಿಂಗಳಲ್ಲಿ ಜಳಕ ಮಾಡಿದಂತಹ ಅನುಭವ...