10
November, 2025

A News 365Times Venture

10
Monday
November, 2025

A News 365Times Venture

ನಿಷೇಧಿತ ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದ್ರೆ SP, DC ವಿರುದ್ಧ ಮುಲಾಜಿಲ್ಲದೆ ಕ್ರಮ- ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ಬೆಂಗಳೂರು,ಜನವರಿ,28,2025 (www.justkannada.in): ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ ಪಿ ಮತ್ತು ಡಿಸಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಿಎಂ  ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ  ರಿವೀವ್ ಮೀಟಿಂಗ್ ಕರೆಯುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ  ಸಿದ್ದರಾಮಯ್ಯ ಎಚ್ಚರಿಸಿದರು.

Key words: CM Siddaramaiah, warns, official, devadasi system

The post ನಿಷೇಧಿತ ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದ್ರೆ SP, DC ವಿರುದ್ಧ ಮುಲಾಜಿಲ್ಲದೆ ಕ್ರಮ- ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...