30
July, 2025

A News 365Times Venture

30
Wednesday
July, 2025

A News 365Times Venture

ಕಬಿನಿ ಬಳಿ ಅಕ್ರಮ ರೆಸಾರ್ಟ್: ಡಿಸಿಎಂಗೆ ವಕೀಲ ರವಿಕುಮಾರ್ ದೂರು.

Date:

ಮೈಸೂರು,ಮೇ,21,2025 (www.justkannada.in): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯ ಕಬಿನಿ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳು ಕಂಡು ಬಂದಿವೆ. ಈ ಅಕ್ರಮ ರೆಸಾರ್ಟ್ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಕೀಲ ರವಿಕುಮಾರ್ ದೂರು ಸಲ್ಲಿಕೆ ಮಾಡಿದ್ದಾರೆ.

ಫ್ಯಾಕ್ಸ್ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವಕೀಲ ವಿ.ರವಿಕುಮಾರ್ ದೂರು ರವಾನೆ ಮಾಡಿದ್ದಾರೆ. ನಾಲ್ಕು ದಿನಗಳ ಹಿಂದೆ ಕಬಿನಿ ರೆಸಾರ್ಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಾಸ್ತವ್ಯ ಹೂಡಿದ್ದರು. ಈ ವೇಳೆ ಅಕ್ರಮ ರೆಸಾರ್ಟ್ ಗಳಿದ್ದರೆ ಕ್ರಮಕೈಗೊಳ್ಳುವುದಾಗಿ ಡಿಕೆ ಶಿವಕುಮಾರ್  ಭರವಸೆ ನೀಡಿದ್ದರು. ಅಕ್ರಮ ರೆಸಾರ್ಟ್ ಗಳ ಪಟ್ಟಿ ಕೊಟ್ಟರೆ ಕ್ರಮ ತೆಗೆದುಕೊಳ್ಳುವುದಾಗಿ ಡಿಕೆ ಶಿವಕುಮಾರ್  ವಾಗ್ದಾನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇದೀಗ 15 ಕ್ಕೂ ಹೆಚ್ಚು ರೆಸಾರ್ಟ್ ಗಳನ್ನ ಪತ್ತೆ ಹಚ್ಚಿ ಅವುಗಳು ಅಕ್ರಮ ರೆಸಾರ್ಟ್ ಅಂತ ವಕೀಲ ರವಿಕುಮಾರ್ ಪತ್ರ ಬರೆದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಕಾರ್ಯದರ್ಶಿ, ಸರ್ಕಾರದ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು, ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಡೈರೆಕ್ಟರ್ ಜನರಲ್ ಅಂಡ್ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಕಾರ್ಮಿಕ ಇಲಾಖೆ ಸೇರಿ ಹಲವರಿಗೆ ರವಿಕುಮಾರ್ ಪತ್ರ ಬರೆದು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

Key words: Illegal Resort, near, Kabini, complains, DCM

The post ಕಬಿನಿ ಬಳಿ ಅಕ್ರಮ ರೆಸಾರ್ಟ್: ಡಿಸಿಎಂಗೆ ವಕೀಲ ರವಿಕುಮಾರ್ ದೂರು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...

ವಿರೋಧ ಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡ್ತಿದ್ದಾರೆ- ಸಚಿವ ಈಶ್ವರ್ ಖಂಡ್ರೆ ಕಿಡಿ

ಬೆಂಗಳೂರು,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿ...