12
March, 2026

A News 365Times Venture

12
Thursday
March, 2026

A News 365Times Venture

ವಿಶ್ವ ಅಧಿಕ ರಕ್ತದೊತ್ತಡ ದಿನ: ಯೋಗ, ಉಚಿತ ಆರೋಗ್ಯ ತಪಾಸಣೆ

Date:

ಮೈಸೂರು,ಮೇ,21, 2025 (www.justkannada.in):  ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗವು, ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಜೆಎಸ್ಎಸ್ಎಹೆಚ್ಇಆರ್) ಯೋಗ ವಿಭಾಗದ ಸಹಯೋಗದೊಂದಿಗೆ ಮತ್ತು ಗ್ಲೋಬಲ್ ಅಸೋಸಿಯೇಷನ್ ಆಫ್ ಪಬ್ಲಿಕ್ ಹೆಲ್ತ್ ಆಶ್ರಯದಲ್ಲಿ, ವಿಶ್ವ ಅಧಿಕ ರಕ್ತದೊತ್ತಡ ದಿನವನ್ನುಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ‘ಅಧಿಕ ರಕ್ತದೊತ್ತಡಕ್ಕಾಗಿ ಯೋಗ’ , ಆರೋಗ್ಯ ಜಾಗೃತಿ ಚಟುವಟಿಕೆಗಳು ಮತ್ತು ಉಚಿತ ಆರೋಗ್ಯ ತಪಾಸಣೆಗಳು ನಡೆದವು. “ನಿಮ್ಮ ರಕ್ತದೊತ್ತಡವನ್ನು ನಿಖರವಾಗಿ ಅಳೆಯಿರಿ, ಅದನ್ನು ನಿಯಂತ್ರಿಸಿ, ಹೆಚ್ಚು ಕಾಲ ಬದುಕಿ” ಎಂಬ ವಾರ್ಷಿಕ ಥೀಮ್‌ ನೊಂದಿಗೆ ಕಾರ್ಯಕ್ರಮ ಜರುಗಿತು.

ಪ್ರಾಂಶುಪಾಲ ಡಾ. ನಾರಾಯಣಪ್ಪ. ಡಿ, ಉಪಪ್ರಾಂಶುಪಾಲ ಡಾ. ಪ್ರವೀಣ್ ಕುಲಕರ್ಣಿ (ಪ್ಯಾರಾ-ಕ್ಲಿನಿಕಲ್); ಆಡಳಿತ ಅಧಿಕಾರಿ  ಸತೀಶ್ ಚಂದ್ರ, ಉಪಡೀನ್ ಡಾ. ಮಧು ಬಿ. ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಸುನಿಲ್ ಕುಮಾರ್. ಡಿ,  ಮತ್ತು ಯೋಗ ವಿಭಾಗದ ಸಂಯೋಜಕ ಡಾ. ಸುಜನ್ ಎಂ.ಯು, ಸಸ್ಯಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಅಮೋಘ ಶ್ರೀ ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಸೀನಿಯರ್ ರೆಸಿಡೆಂಟ್ ಡಾ. ರಶ್ಮಿಎಸ್ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಯೋಗವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಾನವಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ JSSAHER ನ ವಿದ್ಯಾರ್ಥಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. 90 ನಿಮಿಷಗಳ ಅವಧಿಯ ಈ ಕಾರ್ಯಕ್ರಮದಲ್ಲಿ, ಸ್ವಯಂಸೇವಕರು ಭಾಗವಹಿಸುವವರಿಗೆ ಸಹಾಯ ಮಾಡಿದರು.

ಆರೋಗ್ಯಮಾಹಿತಿಯುಳ್ಳ ಪೋಸ್ಟರ್‌ ಗಳ ಮೂಲಕ ಆರೋಗ್ಯ ಜಾಗೃತಿಯನ್ನು ಪ್ರಸಾರ ಮಾಡಲಾಯಿತು ಮತ್ತು ಸಿಬ್ಬಂದಿ ಸದಸ್ಯರನ್ನು ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಮತ್ತು ಹಿಮೋಗ್ಲೋಬಿನ್ ಮಟ್ಟಗಳನ್ನ ಪರೀಕ್ಷಿಸಲಾಯಿತು.

Key words: World Hypertension Day,  Yoga, free , health check-ups

The post ವಿಶ್ವ ಅಧಿಕ ರಕ್ತದೊತ್ತಡ ದಿನ: ಯೋಗ, ಉಚಿತ ಆರೋಗ್ಯ ತಪಾಸಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...