3
March, 2026

A News 365Times Venture

3
Tuesday
March, 2026

A News 365Times Venture

ಮಳೆ ಅಡ್ಡಿ: ನಿರೀಕ್ಷಿತ ಮಟ್ಟದಲ್ಲಿ ರೈತರ ಕೈ ಹಿಡಿಯದ ಮಾವು ಮೇಳ.

Date:

ಮೈಸೂರು,ಮೇ,27,2025 (www.justkannada.in):  ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಮಧ್ಯೆ ಭಾರಿ ಮಳೆಯಿಂದಾಗಿ ಮೈಸೂರಿನಲ್ಲಿ ಆಯೋಜಿಸಿದ್ದ ಮಾವು ಮೇಳ ನಿರೀಕ್ಷಿತ ಮಟ್ಟದಲ್ಲಿ ಕೈಹಿಡಿದಿಲ್ಲ ಎಂಬ ಬೇಸರ ವ್ಯಕ್ತವಾಗಿದೆ.

ಕಳೆದ ವಾರ ಜಿಲ್ಲಾ ತೋಟಗಾರಿಕಾ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಮಾವು ಮೇಳ ಆಯೋಜನೆ ಮಾಡಲಾಗಿತ್ತು. ಕಳೆದ ಶುಕ್ರವಾರ,ಶನಿವಾರ ಮತ್ತು ಭಾನುವಾರ ಆಯೋಜಿಸಲಾಗಿತ್ತು. ಮಾವುಮೇಳಕ್ಕೆ ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸಿದ್ದರು. ಆದರೆ ಈ ಬಾರಿಯ ಮಾವು ಮೇಳಕ್ಕೆ ಮಳೆ ಅಡ್ಡಿಪಡಿಸಿದ್ದು, ಮಾವು ಮೇಳ ಯಶಸ್ವಿ ಆಗದಿದ್ದಕ್ಕೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಮಮತಾ ಬೇಸರ ವ್ಯಕ್ತಪಡಿಸಿದ್ದಾರೆ.

ಮೊದಲ ಎರಡು ದಿನ ಉತ್ತಮವಾದ ಪ್ರತಿಕ್ರಿಯೆ ಸಿಕ್ಕಿತ್ತು. 49 ಸ್ಟಾಲ್ ಗಳನ್ನ ತೆರೆಯಲಾಗಿತ್ತು. ಸುಮಾರು 200 ಟನ್ ಗಳಷ್ಟು ಮಾವು ವಿವಿಧ ಜಿಲ್ಲೆಗಳಿಂದ ಬಂದಿತ್ತು. ಸುಮಾರು 110 ಟನ್ ಗಳಷ್ಟು ಮಾವು ಮಾರಾಟವಾಯಿತು. ಸುಮಾರು 90 ಟನ್ ಮಾರಾಟವಾಗದೆ ಉಳಿಯಿತು‌. ಕೊನೆಯ ದಿನ ಮಾರಾಟವಾಗುವ ನಿರೀಕ್ಷೆ ಇತ್ತು. ಆದರೆ ನಿರಂತರ ಮಳೆ ಬಿದ್ದ ಕಾರಣ ಗ್ರಾಹಕರು ಬಾರದೆ ಮಾರಾಟವಾಗಲಿಲ್ಲ. ಹಾಗಾಗಿ ಕೊಂಚ ಬೇಸರದಲ್ಲೇ ರೈತರು ವಾಪಸ್ ಹೋದರು ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಮಮತಾ ಹೇಳಿದರು.

Key words:  Mysore, Rain, disrupts, mango fair

The post ಮಳೆ ಅಡ್ಡಿ: ನಿರೀಕ್ಷಿತ ಮಟ್ಟದಲ್ಲಿ ರೈತರ ಕೈ ಹಿಡಿಯದ ಮಾವು ಮೇಳ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...