4
March, 2026

A News 365Times Venture

4
Wednesday
March, 2026

A News 365Times Venture

ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ಹೈಕೋರ್ಟ್

Date:

ಬೆಂಗಳೂರು,ಜೂನ್,5,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನ ಜೂನ್ 10ಕ್ಕೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಈ ಪಿಐಎಲ್ ವಿಚಾರಣೆ ನಡೆದಿದ್ದು, ಸ್ಟೇಡಿಯಂ ನಲ್ಲಿ ಎಷ್ಟು ಗೇಟ್ ಗಳಿವೆ ಎಷ್ಟು ಗೇಟ್ ತೆರೆಯಲಾಗಿತ್ತು ಎಂದು  ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಎಜಿ ಶಶಿಕುಮಾರ್ ಶೆಟ್ಟಿ, 21 ಗೇಟ್ ಓಪನ್ ಮಾಡಲಾಗಿತ್ತು ಸರ್ಕಾರ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಜನ ಬಂದಿದ್ದರು. 2 ಲಕ್ಷ ಜನರು ಸ್ಟೇಡಿಯಂ ಸುತ್ತಲೇ ಇದ್ದರು. ಬೆಂಗಳುರಿನ ಜಿಲ್ಲಾ ಉಸ್ತುವಾರಿ ಸಚಿವರೂ ಪರಿಶೀಲಿಸುತ್ತಿದ್ದರು. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ತನಿಖೆಯ ನಂತರ ಸಂಪೂರ್ಣ ಸತ್ಯ ಹೊರಬರಲಿದೆ ಎಂದರು.

ಆರ್ ಸಿಬಿ ಆಟಗಾರರು ರಾಜ್ಯಕ್ಕೆ ದೇಶಕ್ಕೆ  ಆಡುತ್ತಿಲ್ಲ ರಾಜ್ಯ ಸರ್ಕಾರ ಇವರನ್ನ ಗೌರವಿಸುವ ಅಗತ್ಯವಿರಲಿಲ್ಲ ಇದರಿಂದ ಸಮಸ್ಯೆಯಾಗಿದೆ ಎಂದು ವಕೀಲ ಹೇಮಂತ್ ರಾಜ್ ವಾದಿಸಿದರು.

ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ, ಘಟನೆ ಕುರಿತು ವರದಿ ಸಲ್ಲಿಸುವಂತಡ ಸೂಚಿಸಿ ವಿಚಾರಣೆಯನ್ನ ಜೂನ್ 10ಕ್ಕೆ ನಿಗದಿಪಡಿಸಿತು. vtu

Key words: Stampede, case, High Court, adjourned , hearing

 

The post ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...