30
July, 2025

A News 365Times Venture

30
Wednesday
July, 2025

A News 365Times Venture

ಕಾಲ್ತುಳಿತ ಘಟನೆ ಹೊಣೆ ಸರ್ಕಾರವೇ ಹೊರಬೇಕು: ಸಿಎಂ ಡಿಸಿಎಂ ರಾಜೀನಾಮೆ ನೀಡಬೇಕು- ರಘು ಕೌಟಿಲ್ಯ ಆಗ್ರಹ

Date:

ಮೈಸೂರು,ಜೂನ್,5,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಘಟನೆ ಸಂಬಂಧ   ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಣೆ ಹೊರಲೇ ಬೇಕು. ಕನಿಷ್ಠ ನೈತಿಕತೆ ಉಳಿಸಿಕೊಂಡಿದ್ದರೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಡಾ ಪರಮೇಶ್ವರ್ ಅವರುಗಳು ತಮ್ಮ ಪದವಿಗಳಿಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಆರ್. ರಘು ಕೌಟಿಲ್ಯ,  RCB ಗೂ ಕನ್ನಡ, ಕನ್ನಡಿಗ, ಕರ್ನಾಟಕಕ್ಕೂ ಏನು  ಸಂಬಂಧ? ನಮ್ಮ ಜನ ಯಾಕೆ ಇಷ್ಟೊಂದು ಉನ್ಮಾದದಲ್ಲಿ ತೇಲಿದರು, ಪ್ರಾಣಕಳೆದುಕೊಂಡರು? ಎಂಬ ಪ್ರಶ್ನೆಗೆ ಈಗಲೂ ನನಗೆ ಉತ್ತರ ಸಿಗುತ್ತಿಲ್ಲ?

ಬ್ರಿಟನ್‌ನ ಮದ್ಯ ತಯಾರಿಕಾ ಕಂಪನಿ ‘ಡಿಯಾಜಿಯೊ’ RCB ತಂಡದ ಮಾಲೀಕತ್ವ ಹೊಂದಿದೆ. ಐಪಿಎಲ್‌ ಎಂಬುದು ಸಂಪೂರ್ಣವಾಗಿ ಮನರಂಜನೆ ಮತ್ತು ವಾಣಿಜ್ಯ ಉದ್ದೇಶವನ್ನು ಹೊಂದಿದೆ.  ಜನರ ಅತಿರೇಕದ ಅಭಿಮಾನವನ್ನು ಬಂಡವಾಳ ಮಾಡಿಕೊಳ್ಳಲು ಅವಿವೇಕಿ ನಿರ್ಧಾರ ಕೈಗೊಂಡು ಸರ್ಕಾರವು ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು ಎಷ್ಟು ಸರಿ?ವಿಧಾನಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಕಾಲ್ತುಳಿತ ನಡೆದು ಕೆಲವರು ಮೃತ‍ಪಟ್ಟ ಸುದ್ದಿ ತಲುಪಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವ ಮತ್ತು ಇತರ ಸಚಿವರು ಹಾಜರಿದ್ದು ಕಾರ್ಯಕ್ರಮವನ್ನು ಮುಂದುವರಿಸಿದ್ದಾರೆ. ಇದು ಮಾನವೀಯ ಸಂವೇದನೆಯೇ ಇಲ್ಲದ ಭಂಡ ನಡವಳಿಕೆ. 11 ಮಂದಿ ಸತ್ತಿದ್ದಾರೆ ಎಂಬುದು ಗೊತ್ತಾದ ಬಳಿಕವೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆದಿರುವುದು ಸಾವಿನಮನೆಯಲ್ಲಿ ಆಚರಿಸಿದ ಹಬ್ಬ ವಲ್ಲದೇ ಬೇರೇನೂ ಅಲ್ಲ ಎಂದು ರಘು ಕೌಟಿಲ್ಯ ಟೀಕಿಸಿದ್ದಾರೆ.

ಜನರ ಜೀವ ಬಲಿ ಪಡೆದುದರ ಹೊಣೆ ಹೊರಬೇಕಾಗಿದ್ದ ಆರ್‌ಸಿಬಿ ತಂಡದ ಮಾಲೀಕರು ಸನ್ಮಾನ ಮಾಡಿ ಸಂಭ್ರಮಿಸಿದ್ದು ಅಕ್ಷಮ್ಯ. ಈ ಎಲ್ಲದಕ್ಕೂ ಉತ್ತರದಾಯಿತ್ವ ನಿರ್ಣಯವಾಗಲೇಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಣೆ ಹೊರಲೇ ಬೇಕು. ಕನಿಷ್ಠ ನೈತಿಕತೆ ಉಳಿಸಿಕೊಂಡಿದ್ದರೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಡಾ ಪರಮೇಶ್ವರ್ ಅವರುಗಳು ತಮ್ಮ ಪದವಿಗಳಿಗೆ ರಾಜೀನಾಮೆ ನೀಡಬೇಕು.

ಘನ ಉಚ್ಚ ನ್ಯಾಯಾಲಯ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ವಿಚಾರಣೆ ನಡೆಸಿದರೆ ನ್ಯಾಯವಲ್ಲದ ಸಾವು, ನೋವು ಅನುಭವಿಸಿದ ಜೀವಗಳಿಗೆ ಕನಿಷ್ಠಪಕ್ಷ ನ್ಯಾಯವಾದರೂ ದೊರಕಬಹುದು. ಭವಿಷ್ಯತ್ತಿನಲ್ಲಿ ಸರ್ಕಾರಗಳ ‘ತುಘಲಕ್’ ನಿರ್ಧಾರಗಳಿಗೆ ಅಂಕುಶ ಬೀಳಬಹುದು ಎಂದು ರಘು ಕೌಟಿಲ್ಯ ಹೇಳಿದ್ದಾರೆ.vtu

Key words:  government, responsibility, stampede, Raghu Kautilya

The post ಕಾಲ್ತುಳಿತ ಘಟನೆ ಹೊಣೆ ಸರ್ಕಾರವೇ ಹೊರಬೇಕು: ಸಿಎಂ ಡಿಸಿಎಂ ರಾಜೀನಾಮೆ ನೀಡಬೇಕು- ರಘು ಕೌಟಿಲ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...