5
March, 2026

A News 365Times Venture

5
Thursday
March, 2026

A News 365Times Venture

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಈಗಾಗಲೇ 230 ಎಕರೆ ಭೂ ಸ್ವಾಧೀನ –ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಜೂನ್,11,2025 (www.justkannada.in): ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆಗೆ ಈಗಾಗಲೇ 230 ಎಕರೆ ಭೂ ಸ್ವಾಧೀನ ಮಾಡಲಾಗಿದೆ. ಉಳಿದ ಇನ್ನು 10 ಎಕರೆ ಶೀಘ್ರದಲ್ಲೇ ಭೂಸ್ವಾಧೀನ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹಾದೇವಪ್ಪ, ಮೈಸೂರು ಊಟಿ ಹೈವೆ ರಸ್ತೆ ಸ್ಥಳಾಂತರಕ್ಕೂ ಸುಮಾರು 60 ಎಕರೆ ಭೂ ಪ್ರದೇಶವನ್ನ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಜೊತೆಗೆ ವಿಮಾನ ನಿಲ್ದಾಣ ವಿಸ್ತರಣೆ ವೇಳೆ ಮೂರು ನೀರಾವರಿ ಚಾನಲ್ ನಿಲ್ದಾಣದ ಒಳಗೆ ಸೇರ್ಪಡೆ ಆಗುತ್ತದೆ. ಹಾಗಾಗಿ ಚಾನೆಲ್ ಗಳಿಗೆ ಬಾಕ್ಸ್ ಬ್ರಿಡ್ಜ್ ನಿರ್ಮಾಣಕ್ಕೆ ಸರ್ಕಾರದಿಂದಲೇ 100 ಕೋಟಿ ಮೀಸಲಿಡಲು ನಿರ್ಧಾರ ಮಾಡಿದೆ. ಜೊತೆಗೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸುಮಾರು 800 ಎಕರೆ ಜಾಗ ಮೀಸಲಿರಿಸಿದ್ದು ಈಗಾಗಲೇ ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ ಎಂದರು.

ರೈತರಿಗೆ ಸೂಕ್ತ ಪರಿಹಾರ ಕೊಟ್ಟು ಭೂಮಿ ಖರೀದಿ ಮಾಡಲಾಗುತ್ತದೆ. ತಕರಾರು ಮಾಡಿ ಕೋರ್ಟ್ ಮೊರೆ ಹೋಗುವವರ ಮನ ಒಲಿಸಲಾಗುತ್ತದೆ. ಡೀಮ್ಡ್ ಫಾರೆಸ್ಟ್ ಅಡಿ ಒಂದಷ್ಟು ರೈತರ ಜಮೀನುಗಳನ್ನ ಅರಣ್ಯ ಇಲಾಖೆ ವಶಪಡಿಸಿಕೊಂಡು ರೈತರಿಗೆ ತೊಂದರೆ ಕೊಡುತ್ತಿದೆ. ಮರು ಸರ್ವೆ ಮಾಡಿ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.vtu

Key words: 230 acres, land acquisition, expansion, Mysore Airport, HC Mahadevappa

The post ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಈಗಾಗಲೇ 230 ಎಕರೆ ಭೂ ಸ್ವಾಧೀನ –ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...