30
April, 2026

A News 365Times Venture

30
Thursday
April, 2026

A News 365Times Venture

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

Date:

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...