30
April, 2026

A News 365Times Venture

30
Thursday
April, 2026

A News 365Times Venture

ನಟ ಕಮಲ್ ಹಾಸನ್ ಇನ್ನೂ ಕ್ಷಮೆ ಕೇಳಿಲ್ವಾ ? ಹೈಕೋರ್ಟ್ ಪ್ರಶ್ನೆ : ಅರ್ಜಿ ವಿಚಾರಣೆ ಮುಂದೂಡಿಕೆ

Date:

ಬೆಂಗಳೂರು,ಜೂನ್,13,2025 (www.justkannada.in): ತಮಿಳಿನಿಂದ ಕನ್ನಡ ಭಾಷೆ ಹುಟ್ಟಿತು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ  ನಟ ಕಮಲ್ ಹಾಸನ್ ನಟಿಸಿರುವ ‘ಥಗ್ ಲೈಫ್’ ಸಿನಿಮಾಕ್ಕೆ ಕರ್ನಾಟಕದಲ್ಲಿ ಅನಧಿಕೃತ ನಿಷೇಧ ಹೇರಲಾಗಿದೆ. ಥಗ್ ಲೈಫ್’ ಸಿನಿಮಾ ರಿಲೀಸ್​ಗೆ ಭದ್ರತೆ ಕೋರಿ ಕಮಲ್ ಹಾಸನ್ ಅವರು ಕರ್ನಾಟಕ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರದ ವಿತರಣೆ ಮತ್ತು ಬಿಡುಗಡೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಹೈಕೋರ್ಟ್​​ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗ ಪ್ರಸನ್ನ ಅವರು ಅರ್ಜಿ ವಿಚಾರಣೆ ವೇಳೆ, ಕಮಲ್ ಹಾಸನ್​ ಇನ್ನೂ ಕ್ಷಮೆ ಕೇಳಿಲ್ಲವೇ? ಸುಪ್ರೀಂ ಕೋರ್ಟ್‌ ಏನಾಯಿತು ಎಂದು ​​​​​ ಕಮಲ್ ಪರ ವಕೀಲರಿಗೆ ಪ್ರಶ್ನಿಸಿತು.

ಕನ್ನಡ ಸಾಹಿತ್ಯ ಪರಿಷತ್‌ ಪ್ರತಿನಿಧಿಸಿರುವ ಹಿರಿಯ ವಕೀಲ ಎಸ್‌ ಬಸವರಾಜು, ಕ್ಷಮೆ ಕೇಳಿಲ್ಲ. ಸುಪ್ರೀಂ ಕೋರ್ಟ್‌ ಇಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆಯಷ್ಟೇ ಎಂದು ಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 20 ಕ್ಕೆ ಮುಂದೂಡಿದೆ.vtu

Key words: Kamal Haasan, apologize, High Court, Petition, hearing

The post ನಟ ಕಮಲ್ ಹಾಸನ್ ಇನ್ನೂ ಕ್ಷಮೆ ಕೇಳಿಲ್ವಾ ? ಹೈಕೋರ್ಟ್ ಪ್ರಶ್ನೆ : ಅರ್ಜಿ ವಿಚಾರಣೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...