25
August, 2026

A News 365Times Venture

25
Tuesday
August, 2026

A News 365Times Venture

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಂಟು KMF, ಎರಡು ಅಮುಲ್ ಉತ್ಪನ್ನ ಮಳಿಗೆಗೆ ಅನುಮತಿ- ಡಿಕೆ ಶಿವಕುಮಾರ್

Date:

ಬೆಂಗಳೂರು, ಜೂನ್, 18,2025 (www.justkannada.in):  ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಅಮುಲ್ ಉತ್ಪನ್ನ ಮಳಿಗೆಗಳನ್ನು  ತೆರೆಯಲು ಅನುಮತಿ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಂಟು ಮಳಿಗೆಗಳನ್ನು ತೆರೆಯಲು ಕೆಎಂಎಫ್‌ ಗೆ ಟೆಂಡರ್ ಕೊಟ್ಟಿದ್ದೇವೆ. ಎರಡು ನಿಲ್ದಾಣಗಳಲ್ಲಿ ಮಾತ್ರ ಅಮುಲ್‌ಗೆ ಅವಕಾಶ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಂಟು ಮಳಿಗೆಗಳನ್ನು ತೆರೆಯಲು ನಮ್ಮದೇ ರಾಜ್ಯದ ಕೆಎಂಎಫ್ ​ಗೆ ಅನುಮತಿ ಕೊಡಲಾಗಿದೆ. ಮೆಟ್ರೋ ನಿಲ್ದಾಣಗಳನ್ನು ಮಳಿಗೆಗಳನ್ನು ತೆರೆಯುವುದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗಿತ್ತು. ಅದರ ಅಡಿಯಲ್ಲಿ ಅಮುಲ್​ ಗೆ ಅವಕಾಶ ಕೊಡಲಾಗಿದೆ ಎಂದು  ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕೆಎಂಎಫ್ ನಂದಿನಿ ಬಿಟ್ಟು ಬೇರೆ ರಾಜ್ಯದ ಅಮುಲ್ ಮಳಿಗೆಗಳಿಗೆ ಅವಕಾಶ ಕೊಡುವ ಬಗ್ಗೆ ಸಾರ್ವಜನಿಕರು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು

ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಜೆಡಿಎಸ್ ಕೂಡ, ‘ಡುಪ್ಲಿಕೇಟ್ ಸಿಎಂ ಡಿಕೆಶಿ ಅವರ ನವರಂಗಿ ಆಟ ಮತ್ತೆ ಬಯಲಾಗಿದೆ. ಚುನಾವಣೆಗೆ ಮುಂಚೆ ಸೇವ್ ನಂದಿನಿ ಎಂದಿದ್ದವರು ಈಗ ಕಮಿಷನ್ ಆಸೆಗೆ ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿದ್ದಾರೆ’ ಎಂದು ಜಾತ್ಯತೀತ ಜನತಾದಳ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.vtu

Key words: Permission, KMF, Amul, product, Namma metro, DK Shivakumar

The post ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಂಟು KMF, ಎರಡು ಅಮುಲ್ ಉತ್ಪನ್ನ ಮಳಿಗೆಗೆ ಅನುಮತಿ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ...

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...