25
August, 2026

A News 365Times Venture

25
Tuesday
August, 2026

A News 365Times Venture

ಹೃದಯಾಘಾತ ಸರಣಿ ಸಾವು : ಮೈಸೂರಿನ ಜಯದೇವ ಆಸ್ಪತ್ರೆಗೆ ಹಾಸನ ರೋಗಿಗಳ ಲಗ್ಗೆ

Date:

ಮೈಸೂರು,ಜೂನ್,30,2025 (www.justkannada.in): ಹಾಸನ ಜಿಲ್ಲೆಯಲ್ಲಿ ಸುಮಾರು 40 ದಿನಗಳಲ್ಲಿ 20ಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದು ಈ ಹಿನ್ನೆಲೆಯಲ್ಲಿ  ಹಾಸನ ರೋಗಿಗಳು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಲಗ್ಗೆ ಇಡುತ್ತಿದ್ದಾರೆ.

ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಪ್ರತಿನಿತ್ಯ ಮುನ್ನೂರರಿಂದ ನಾಲ್ಕು‌ನೂರು ಮಂದಿ ರೋಗಿಗಳು ಹಾಸನದಿಂದ ಮೈಸೂರಿಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಎದೆ‌ನೋವು ಎಂದು ಚಿಕಿತ್ಸೆಗೆ ಬರುತ್ತಿದ್ದು ಒಪಿಡಿಗೆ ಹೆಚ್ಚಾಗಿ ಓಡೋಡಿ ಬರುತ್ತಿದ್ದಾರೆ.

ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ನೂರು ಮಂದಿ ಮೃತಪಡುತ್ತಾರೆ. ಏಪ್ರಿಲ್ ತಿಂಗಳಲ್ಲಿ 109 ಮಂದಿ ಸಾವನ್ನಪ್ಪಿದ್ದಾರೆ. ಮೇ ತಿಂಗಳಲ್ಲಿ 106 ಮಂದಿ ಮೃತರಾಗಿದ್ದಾರೆ. ತೀವ್ರ ಹೃದಯಾಘತಾದಿಂದ ಪ್ರತಿ ತಿಂಗಳು 70 ರಿಂದ 80 ಮಂದಿ ಸಾವನ್ನಪ್ಪುತ್ತಿದ್ದು, ಸಾವನ್ನಪ್ಪುವವರ ಪೈಕಿ ಬಹುತೇಕ ಯುವಕ ಸಮೂಹದವರೇ ಹೆಚ್ಚಾಗಿರುತ್ತಾರೆ.

20 ವರ್ಷದ ಹಾಸನದ ಯುವಕನಿಗೆ ತೀವ್ರ ಹೃದಯಾಘಾತ

ನೆನ್ನೆ ಸಂಜೆ ಹೊಳೆನರಸೀಪುರದಲ್ಲಿ 20 ವರ್ಷದ ಹಾಸನದ ಯುವಕ ಮಂಜುನಾಥ್ ಎಂಬುವವನಿಗೆ ತೀವ್ರ ಹೃದಯಾಘಾತವಾಗಿದ್ದು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ದುರಭ್ಯಾಸ ಇಲ್ಲದಿದ್ದರೂ ಕೂಡ ಹೃದಯಾಘಾತ ಆಗಿದ್ದು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಸ್ಟಂಟ್‌ ಹಾಕಿ ಚಿಕಿತ್ಸೆ ಕೊಡುತ್ತಿದ್ದಾರೆ. ರೋಗಿ ಮಂಜುನಾಥ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.vtu

key words: Hassan patients , Jayadeva Hospital , Mysore

The post ಹೃದಯಾಘಾತ ಸರಣಿ ಸಾವು : ಮೈಸೂರಿನ ಜಯದೇವ ಆಸ್ಪತ್ರೆಗೆ ಹಾಸನ ರೋಗಿಗಳ ಲಗ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...