5
July, 2025

A News 365Times Venture

5
Saturday
July, 2025

A News 365Times Venture

ಸುತ್ತೂರು ಮಠಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಭೇಟಿ : ದಸರಾ ಉದ್ಘಾಟನೆ ಕುರಿತು ಏನಂದ್ರು..?

Date:

ಮೈಸೂರು,ಜುಲೈ,5,2025 (www.justkannada.in):  ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಇಂದು  ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಬೆಳಗಿನ ಉಪಾಹಾರ ಸುತ್ತೂರು ಮಠದಲ್ಲೇ ಸೇವಿಸಿದ ಬಾನು ಮುಷ್ತಾಕ್ ಅವರು ಶ್ರೀಗಳ ಜೊತೆ ಪರಸ್ಪರ ಸಮಾಲೋಚನೆ  ನಡೆಸಿ ಕೃತಿಗಳ ಬಗ್ಗೆ ಚರ್ಚಿಸಿದರು.

ಸುತ್ತೂರು ಮಠಕ್ಕೆ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಾನು ಮುಷ್ತಾಕ್, ಪ್ರಶಸ್ತಿ ಬಂದು ಎರಡು ತಿಂಗಳು ಆಯ್ತು. ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ. ನನಗೂ ತುಂಬಾ ಖುಷಿ ಆಗಿದೆ. ಸುತ್ತೂರು ಮಠದವರು ನನಗೆ ಯಾವಾಗಲೂ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಈಗಲೂ ಕರೆದು ಸನ್ಮಾನ ಮಾಡಿದ್ದಾರೆ. ಎಲ್ಲರಿಗೂ ನನ್ನ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ ಎಂದರು.

ಕೂಸು ಹುಟ್ಟೋ ಮೊದಲೇ ಕುಲಾವಿ ಯಾಕೆ.?

ಈ ಬಾರಿ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಹ್ವಾನ ಸಾಧ್ಯತೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸ್ವತಃ ಬಾನು ಮುಷ್ತಾಕ್, ಕೂಸು ಹುಟ್ಟೋ ಮೊದಲೇ ಕುಲಾವಿ ಯಾಕೆ.? ಈ ವಿಚಾರ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಏನು ನಿರ್ಧಾರ ಮಾಡುತ್ತೋ ಗೊತ್ತಿಲ್ಲ ಎಂದರು.

ಪ್ರಶಸ್ತಿ ಬಂದಿದ್ದಕ್ಕೆ ಪ್ರಧಾನಿ ಮೋದಿ ವಿಶ್ ಮಾಡಿದ್ದರಾ ಎಂಬ ಪ್ರಶ್ನೆಗೆ ಉತ್ತರಿಸಿದ ಬಾನು ಮುಷ್ತಾಕ್, ಮೋದಿ ವಿಶ್ ಮಾಡಿಲ್ಲ. ವಿಶ್ ಮಾಡುತ್ತಾರೆ ಅಂತ ಅಂದುಕೊಂಡಿದ್ದೇನೆ ಎಂದರು.vtu

Key words: Booker Prize winner, Banu Mushtaq, visits, Mysore, Suttur Math

The post ಸುತ್ತೂರು ಮಠಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಭೇಟಿ : ದಸರಾ ಉದ್ಘಾಟನೆ ಕುರಿತು ಏನಂದ್ರು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

AICC ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಸ್ತಿತ್ವಕ್ಕೆ: ಜು.15ಕ್ಕೆ ಮೊದಲ ಸಭೆ

ಬೆಂಗಳೂರು,ಜುಲೈ,5,2025 (www.justkannada.in): ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ...

ಚಿತ್ರ ಕಲಾವಿದೆ ಮಾಧವಿ ಪಾರೇಖ್ ಗೆ ‘ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಬೆಂಗಳೂರು,ಜುಲೈ,5,2025 (www.justkannada.in):  ಗುಜರಾತಿನ ಹೆಸರಾಂತ ಚಿತ್ರ ಕಲಾವಿದೆ ಅವರಿಗೆ ಕರ್ನಾಟಕ ಚಿತ್ರಕಲಾ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಇನ್ನೂ ತೀರ್ಮಾನಿಸಿಲ್ಲ- ಬಾನು ಮುಷ್ತಾಕ್

ಮೈಸೂರು,ಜುಲೈ,5,2025 (www.justkannada.in): ಮುಂಬರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ...

ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ಕಡ್ದಾಯ: ನ್ಯಾ. ಶ್ರೀ ಶೈಲ್ ಬಾಗಾಡಿ

ಬೆಂಗಳೂರು ಗ್ರಾಮಾಂತರ, ಜುಲೈ, 5,2025 (www.justkannada.in): ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು...