8
July, 2025

A News 365Times Venture

8
Tuesday
July, 2025

A News 365Times Venture

ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್

Date:

ಬೆಂಗಳೂರು, ಜುಲೈ 8,2025 (www.justkannada.in):  ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ವಿರುದ್ದ ಪಡಿತರ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದಾರೆ.

ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ 260 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಮುಷ್ಕರ  ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಬಾಕಿ ಹಣ ಬಿಡುಗಡೆಗೆ  ಸರ್ಕಾರಕ್ಕೆ 15ದಿನಗಳ ಗಡುವು ನೀಡಲಾಗಿತ್ತು. ಆದರೆ ಸರ್ಕಾರ ಪಾವತಿ ಮಾಡದ ಹಿನ್ನೆಲೆಯಲ್ಲಿ  ಪಡಿತರ ಲಾರಿ ಮಾಲೀಕರು ಚಾಲಕರು ಅಕ್ಕಿ ಸಾಗಾಣೆ ಮಾಡುವುದನ್ನ ಬಂದ್ ಮಾಡಿದ್ದಾರೆ. ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಗೋದಾಮು ಮುಂದೆ ಲಾರಿ ನಿಲ್ಲಿಸಿ ಮುಷ್ಕರ ಹೂಡಿದ್ದಾರೆ.

ಈ ಕುರಿತು  ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ‌.ಆರ್.ಷಣ್ಮುಗಪ್ಪ, ಯಾವುದೇ ಭರವಸೆ ಈಡೇರಿಸದ ಹಿನ್ನೆಲೆ ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್​ ಎಂದಿದ್ದಾರೆ. ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಹೇಳಿದ್ದಾರೆ.

5 ತಿಂಗಳಿನಿಂದ 260 ಕೋಟಿ ರೂ. ಬಿಡುಗಡೆ ಆಗಬೇಕು. ಜೂ.19ರಂದು 100 ಕೋಟಿ ರೂ. ಹಾಕುವುದಾಗಿ ಹೇಳಿದ್ದರು. ಆದರೆ ಈವರೆಗೂ 1 ರೂ. ಹಣ ಬಂದಿಲ್ಲ ನಮ್ಮ ಖಾತೆಗೆ. ಆಹಾರ ಸಚಿವರು, ಅಧಿಕಾರಿಗಳು ಮಾತುಕತೆಗೆ ಕರೆದಿಲ್ಲ, ಹಾಗಾಗಿ ಇಂದಿನಿಂದ ಮುಷ್ಕರ ಮಾಡಲು ಮುಂದಾಗಿದ್ದೇವೆ. ಹಣ ಬಂದ ಮೇಲೆ ನಾವು ಅಕ್ಕಿ ಸರಬರಾಜು ಮಾಡಲು ಮುಂದಾಗುತ್ತೇವೆ ಎಂದಿದ್ದಾರೆ.vtu

Key words: Ration, truck owners ,drivers ,strike

The post ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ಪಡಿತರ ಸಾಗಾಟ ಲಾರಿ ಮಾಲೀಕರ ಮುಷ್ಕರಕ್ಕೆ ಮಣಿದ ಸರ್ಕಾರ:  ಬಾಕಿ ಹಣ ಬಿಡುಗಡೆಗೆ ಆದೇಶ

ಬೆಂಗಳೂರು,ಜುಲೈ,7,2025 (www.justkannada.in): 4 ತಿಂಗಳ ಪಡಿತರ ಸಾಗಾಣೆ ವೆಚ್ಚವನ್ನು ಬಾಕಿ ಉಳಿಸಿಕೊಂಡಿದ್ದ...

ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಣೆ

ಬಿಹಾರ ,ಜುಲೈ,8,2025 (www.justkannada.in):  ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರ ಒಲೈಕೆಗಾಗಿ ...