12
July, 2025

A News 365Times Venture

12
Saturday
July, 2025

A News 365Times Venture

ಅಂಬೇಡ್ಕರ್ ಆಶಯದಂತೆ ಆಡಳಿತ ಎನ್ನುವ ಸಿಎಂ ಅವರೇ  ಪಾಲಿಕೆ ಕಾರ್ಮಿಕರತ್ತ ಗಮನ ಹರಿಸಿ-ಮಾಜಿ ಮೇಯರ್ ಶಿವಕುಮಾರ್

Date:

ಮೈಸೂರು,ಜುಲೈ,10,2025 (www.justkannada.in): ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಗಳ ನೌಕರರು, ಪೌರಕಾರ್ಮಿಕರು, ಯುಜಿಡಿ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರೇ  ಪಾಲಿಕೆ ಕಾರ್ಮಿಕರತ್ತ ಗಮನಹರಿಸಿ ಅವರ ಬೇಡಿಕೆಗಳನ್ನ ಈಡೇರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವಕುಮಾರ್ ಆಗ್ರಹಿಸಿದರು.

ಮೈಸೂರಿನಲ್ಲಿ ಪಾಲಿಕೆ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಸ್ವತಃ ಪಾಲ್ಗೊಂಡು ಮಾತನಾಡಿದ ಮಾಜಿ ಮೇಯರ್ ಶಿವಕುಮಾರ್  ಅವರು, ಪಾಲಿಕೆ ನೌಕರರು ಮತ್ತು ಯುಜಿಡಿ ಕಾರ್ಮಿಕರು ಮೂಲಭೂತ ಸೌಕರ್ಯಗಳನ್ನ ಕೊಡವಂತಹ ಸಂಸ್ಥೆಯ ನೌಕರರಾಗಿದ್ದಾರೆ.  ಯುಜಿಡಿ ನೌಕರರು ಪೌರಕಾರ್ಮಿಕರು ಎಲ್ಲರೂ ಕೂಡ  ಬೇಡಿಕೆಗಳನ್ನ ಈಡೇರಿಸಲು ಆಗ್ರಹಿಸಿ ಧರಣಿ ಕುಳಿತಿದ್ದಾರೆ. ವಿಶೇಷವಾಗಿ ಯುಜಿಡಿ ನೌಕರರು ಸೇವೆ ಖಾಯಂಗೆ ಒತ್ತಾಯಿಸಿದ್ದಾರೆ. ಹೀಗಾಗಿ ಸಿಎಂ ಇವರತ್ತ ಗಮನ ಹರಿಸಬೇಕು ಎಂದರು.

ಸಾಮಾಜಿಕ ನ್ಯಾಯ ಕೊಡುತ್ತೇವೆ. ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ  ಆಡಳಿತ  ನಡೆಸುತ್ತೇವೆ ಎಂದು ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್,  ಸಿಎಂ ಸಿದ್ದರಾಮಯ್ಯ   ಈಗ ಕಾರ್ಮಿಕರ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಿದ್ದಾರೆ. ಅಂಬೇಡ್ಕರ್ ಅವರು ಕಾರ್ಮಿಕರ ಬಗ್ಗೆ ಹಲವಾರು ಧ್ವನಿಗಳನ್ನ ಎತ್ತಿದವರು. ಹಿಂದೆ ಕಾರ್ಮಿಕರು 16ರಿಂದ 17 ಗಂಟೆ ಕೆಲಸ ಮಾಡುತ್ತಿದ್ದರು. ಅದನ್ನ 8 ಗಂಟೆಗೆ ಇಳಿಸಿದವರು ಅಂಬೇಡ್ಕರ್ ರವರು. ಕಾರ್ಮಿಕರಿಗೆ ರಜೆ ಘೋಷಣೆ ಮಾಡಿದವರು ಅಂಬೇಡ್ಕರ್ ಅವರು . ಕಾರ್ಮಿಕರಿಗೆ ವಿಶೇಷ ಸವಲತ್ತುಗಳನ್ನ ಕೊಡಬೇಕು ಎಂದವರು ಅಂಬೇಡ್ಕರ್ ಅವರು. ಹೀಗೆ ಅಂಬೇಡ್ಕರ್ ಅವರು ಕಾರ್ಮಿಕರ ಬಗ್ಗೆ ಕಾಳಜಿ ಇಟ್ಟುಕೊಂಡಿದ್ದರು.

ಆದರೆ  ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇವೆ ಎನ್ನುವ ಕಾಂಗ್ರೆಸ್ ನವರು ಈ ನೌಕರರ ಬಗ್ಗೆ ಗಮನ ಹರಿಸಬೇಕಲ್ಲವೇ..?  ಅದನ್ನ ಬಿಟ್ಟು ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾನೇ ಸಿಎಂ ಅಂತಾ ಹೇಳಿ ತಿರುಗಾಡುತ್ತಿದ್ದಾರೆ. ಅವರೇ ಐದು ವರ್ಷ ಸಿಎಂ ಆಗಲಿ. ಆದರೆ  ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನೌಕರರ ಕಡೆ ಗಮನ ಹರಿಸಿ ಅವರ ಬೇಡಿಕೆಗಳನ್ನ ಈಡೇರಿಸಲಿ ಎಂದು ಶಿವಕುಮಾರ್ ಒತ್ತಾಯಿಸಿದರು.vtu

Key words: Mysore city corporation, Employees, Protest, Former Mayor, Shivakumar

The post ಅಂಬೇಡ್ಕರ್ ಆಶಯದಂತೆ ಆಡಳಿತ ಎನ್ನುವ ಸಿಎಂ ಅವರೇ  ಪಾಲಿಕೆ ಕಾರ್ಮಿಕರತ್ತ ಗಮನ ಹರಿಸಿ-ಮಾಜಿ ಮೇಯರ್ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...