12
July, 2025

A News 365Times Venture

12
Saturday
July, 2025

A News 365Times Venture

ನಂದಿನಿ ನೂತನ ತುಪ್ಪದ ಪ್ಯಾಕೆಟ್ ಬಿಡುಗಡೆ

Date:

ಮೈಸೂರು,ಜುಲೈ,10,2025 (www.justkannada.in): ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ನಂದಿನಿ ಬ್ರಾಂಡ್‌ ನ ನೂತನ ವಿನ್ಯಾಸದ ನಂದಿನಿ ತುಪ್ಪದ 500 ಎಂ.ಎಲ್ ಹಾಗೂ 1 ಲೀ ಪ್ಯಾಕೆಟ್ ಅನ್ನು ಮೈಸೂರು ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಗಳ ಕಛೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಹಾಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿರವರು ಬಿಡುಗಡೆ ಮಾಡಿದರು.

ನೂತನ ನಂದಿನಿ ತುಪ್ಪದ ಪ್ಯಾಕೆಟ್‌ನ ಮೇಲೆ ಹಾಲೋಗ್ರಾಮ್ ಮುದ್ರಿಸಲಾಗಿದ್ದು ನಕಲು ಮಾಡಲು ಅವಕಾಶವಿರುವುದಿಲ್ಲ. ತುಪ್ಪದ ಪ್ಯಾಕೆಟ್ ಕೋಡ್ ಸ್ಕ್ಯಾನ್ ಮಾಡಿದರೆ ಸಂರ್ಪೂಣ ಮಾಹಿತಿ ಸಿಗಲಿದೆ, ಪ್ಯಾಕೆಟ್ ಬ್ಯಾಚ್ ನಂಬರ್, ತಯಾರಿಸಿದ ದಿನಾಂಕ ಹಾಗೂ ಯಾವ ದಿನಾಂಕದವರೆಗೆ ಬಳಸಬಹುದು ಎಂಬುದರ ಮಾಹಿತಿ ಸಿಗಲಿದೆ.

500 ಎಂ.ಎಲ್ ಮತ್ತು 1 ಲೀ ಪ್ಯಾಕೆಟ್‌ ಅನ್ನು ನವೀಕರಿಸಿ ಬಿಡುಗಡೆ ಮಾಡಿದ್ದು, ತುಪ್ಪದ ಗುಣಮಟ್ಟ ಮತ್ತು ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿರುವುದಿಲ್ಲ. ಎಂದಿನಂತೆ ಅದೆ ಸ್ವಾದ ಹಾಗೂ ಪೌಷ್ಟಿಕಯುಕ್ತ ತುಪ್ಪವನ್ನು ಗ್ರಾಹಕರು ಸವಿಯಬಹುದಾಗಿರುತ್ತದೆ. ಈ ಸಂದರ್ಭದಲ್ಲಿ ಕ.ಹಾ.ಮದ ಮಾರುಕಟ್ಟೆ ನಿರ್ದೇಶಕರುಗಳು ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ನಾಯ್ಕ ಕೆ.ಎನ್ ಹಾಗೂ ಕ.ಹಾ.ಮದ ಹಿರಿಯ ನಿರ್ದೇಶಕರುಗಳು ಮತ್ತು ಎಲ್ಲಾ ಹಾಲು ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರುಗಳು ಉಪಸ್ಥಿತರಿದ್ದರು.vtu

Key words: Mysore, Nandini,  new, ghee packet, release

The post ನಂದಿನಿ ನೂತನ ತುಪ್ಪದ ಪ್ಯಾಕೆಟ್ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ

ಚಿಕ್ಕಮಗಳೂರು,ಜುಲೈ,12,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು...

ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ

ಬೆಂಗಳೂರು,ಜುಲೈ,12,2025 (www.justkannada.in): ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿವಿಧ ಸೇವಾಕಾರ್ಯದಲ್ಲಿ ತೊಡಗಿರುವ ಪುನೀತ್...

ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು: ಜು.4 ರಂದು 200 ಬಸ್ ಲೋಕಾರ್ಪಣೆ – ಡಾ. ಪುಷ್ಪಾ ಅಮರನಾಥ್

ಮೈಸೂರು,ಜುಲೈ,12,2025 (www.justkannada.in): ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ....

ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

ಮೈಸೂರು ಜುಲೈ, 12,2025 (www.justkannada.in): ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ...