16
April, 2026

A News 365Times Venture

16
Thursday
April, 2026

A News 365Times Venture

ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ

Date:

ಬೆಂಗಳೂರು,ಜುಲೈ,22, 2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಸಂಬಂಧ ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳುವ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತಾಡಿದ ಸಚಿವ ಡಾ ಹೆಚ್ ಸಿ ಮಹಾದೇವಪ್ಪ, ಮುಡಾ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ರಾಜಕೀಯ ವಿಷಯಗಳಿಗೆ ಸರ್ಕಾರಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದಕ್ಕೆ  ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಇನ್ನಾದರೂ ರಾಜ್ಯದ ಬಿಜೆಪಿ ನಾಯಕರು ತಮ್ಮ ಮೊಂಡುವಾದವನ್ನು ಬಿಡಬೇಕು. ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಯನ್ನ ದುರ್ಬಳಕೆ ಮಾಡಿಕೊಂಡಿದೆ. ಪಾದಯಾತ್ರೆ ಮಾಡಿ ಸರ್ಕಾರ ಅಸ್ಥಿರ ಗೊಳಿಸುವ ಕೆಲಸ ಮಾಡಿದರು ಈಗ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ ಬಿಜೆಪಿ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಲಿ ಎಂದರು.

ಸಿದ್ದರಾಮಯ್ಯ ಅವರನ್ನ  40 ವರ್ಷಗಳಿಂದ ಬಲ್ಲೆ, ಅವರು ಯಾವತ್ತೂ ಸ್ವಜನ ಪಕ್ಷಾಪಾತ ಮಾಡಿದವರಲ್ಲ. ವಿನಾಕಾರಣ ಬಿಜೆಪಿ ನಾಯಕರು ಅವರ ಮತ್ತು ಕುಟುಂಬದವರ ನೆಮ್ಮದಿಯನ್ನು ಹಾಳು ಮಾಡಿದರು, ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಲ್ಲ, ಒಂದು ಸರ್ಕಾರದ ಮುಖ್ಯಸ್ಥ, ಪ್ರಜಾಪ್ರಭುತ್ವವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ ಅನ್ನೋದು ಅವರು ಆಡುವ ಆಟಗಳಿಂದ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.vtu

Key words: Muda case, Supreme Court, ED,  BJP – Minister, HC Mahadevappa

The post ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಗ್ಗಿ ವಾಸುದೇವ್ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡ ವಿಚಾರ: KN ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ತಿರುಗೇಟು

ಬೆಂಗಳೂರು,ಏಪ್ರಿಲ್,16,2026 (www.justkannada.in):  ಕೇಂದ್ರ ಸಚಿವ ಅಮಿತ್‌ ಶಾ ಭಾಗವಹಿಸಿದ್ದ ಸದ್ಗುರು ಜಗ್ಗಿ...

ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...

11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ

ಬೆಂಗಳೂರು,ಏಪ್ರಿಲ್,16,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ....

ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ

ಚೆನ್ನೈ,ಏಪ್ರಿಲ್,16,2026 (www.justkannada.in):  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ...