30
April, 2026

A News 365Times Venture

30
Thursday
April, 2026

A News 365Times Venture

ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ

Date:

ಬೆಂಗಳೂರು,ಜುಲೈ,30,2025 (www.justkannada.in): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.vtu

Key words: 50% discount, books, Kannada Book Authority

The post ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...