26
August, 2026

A News 365Times Venture

26
Wednesday
August, 2026

A News 365Times Venture

11ಇ ಸ್ಕೆಚ್ ವಿತರಿಸುವಲ್ಲಿ ಅಕ್ರಮ: ಲೈಸೆನ್ಸ್ ಸರ್ವೇಯರ್ ಸಸ್ಪೆಂಡ್.

Date:

ಮೈಸೂರು,ಜುಲೈ,31,2025 (www.justkannada.in):  ರಸ್ತೆ ಮತ್ತು ಮನೆಗಳಿರುವ ಜಾಗಕ್ಕೆ 11ಇ ಸ್ಕೆಚ್ ವಿತರಿಸಿ ಅಕ್ರಮವೆಸಗಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಲೈಸೆನ್ಸ್ ಸರ್ವೆಯರ್ ರೊಬ್ಬರನ್ನು ಅಮಾನತು ಮಾಡಲಾಗಿದೆ.

ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್  ಅವರನ್ನ ಅಮಾನತು ಮಾಡಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರಾದ ರಮ್ಯಾ ಆದೇಶ ಹೊರಡಿಸಿದ್ದಾರೆ. 11ಇ ಸ್ಕೆಚ್ ವಿತರಿಸುವ ವೇಳೆ ಲೈಸೆನ್ಸ್ ಸರ್ವೆಯರ್ ಎಟಿ ನಾಗರಾಜ್ ಅಕ್ರಮ ಎಸಗಿರುವ ಬಗ್ಗೆ ಚಾಮುಂಡೇಶ್ವರಿ ರೆವಿನ್ಯೂ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ದೂರು ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.

ದಾಖಲೆಗಳನ್ನ ಪರಿಶೀಲಿಸಿದಾಗ 11ಇ ಸ್ಕೆಚ್ ವಿತರಿಸುವ ವೇಳೆ ಲೈಸೆನ್ಸ್ ಸರ್ವೆಯರ್ ಎಟಿ ನಾಗರಾಜ್ ಅಕ್ರಮ ಎಸಗಿರುವುದು ಖಚಿತವಾದ್ದು ಈ ಹಿನ್ನಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ದೂರಿನ ಅನ್ವಯದಂತೆ ಭೂದಾಖಲೆಗಳ ಸಹಾಯಕ ನಿರ್ದೇಶಕ  ಮಂಜುನಾಥ್ ರವರು ದಾಖಲೆಗಳನ್ನ ಪರಿಶೀಲಿಸಿದಾಗ ಸಾರ್ವಜನಿಕರು ಓಡಾಡುವ ರಸ್ತೆ ಹಾಗೂ ಮನೆಗಳಿರುವ ಜಾಗ 5 1/4 ಗುಂಟೆ ಪ್ರದೇಶಕ್ಕೆ ಅಕ್ರಮವಾಗಿ 11ಇ ಸ್ಕೆಚ್ ವಿತರಿಸಿರುವುದು ಕಂಡುಬಂದಿತ್ತು. ಮಂಜುನಾಥ್  ಅವರು ನೀಡಿದ ವರದಿ ಅನ್ವಯದಂತೆ ಅಕ್ರಮ ಎಸಗಿದ ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್ ರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.vtu

Key words: 11E Sketch, illegal, distributing, License Surveyor, Suspend

The post 11ಇ ಸ್ಕೆಚ್ ವಿತರಿಸುವಲ್ಲಿ ಅಕ್ರಮ: ಲೈಸೆನ್ಸ್ ಸರ್ವೇಯರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...