7
March, 2026

A News 365Times Venture

7
Saturday
March, 2026

A News 365Times Venture

ಜಮೀನು ಒತ್ತುವರಿ: ಮಾಲೀಕರಿಗೆ 1.60 ಕೋಟಿ ರೂ. ಪರಿಹಾರ ಚೆಕ್ ವಿತರಣೆ

Date:

ಮೈಸೂರು,ಆಗಸ್ಟ್,2,2025 (www.justkannada.in): ನಗರಸಭೆಯಿಂದ ಘನತ್ಯಾಜ್ಯ ವಸ್ತುಗಳ ನಿರ್ವಹಣಾ ಘಟಕ ಸ್ಥಾಪಿಸುವ ವೇಳೆ ಜಮೀನು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ಜಮೀನು  ಮಾಲೀಕರಿಗೆ  1,60,82,242 ರೂ.ಗಳ ಪರಿಹಾರ ಚೆಕ್ ಅನ್ನು ಮೈಸೂರು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವಿತರಿಸಲಾಯಿತು.

ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ, ಲೋಕಾಯುಕ್ತ ಕಛೇರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಮೀನು ಮಾಲೀಕರಾದ ಕೆ. ಪುಟ್ಟಮಾದಯ್ಯ ಅವರಿಗೆ ಪರಿಹಾರವಾಗಿ 1,60,82,242 ರೂ.ಗಳ ಪರಿಹಾರ ಚೆಕ್ ವಿತರಣೆ ಮಾಡಲಾಯಿತು.

 ಏನಿದು ಪ್ರಕರಣ

ಕೆ. ಪುಟ್ಟಮಾದಯ್ಯ ಬಿನ್ ಲೇಟ್ ಮಾದಯ್ಯ ಅವರು ಅವರ ಅಕ್ಕತಂಗಿಯರ ಹೆಸರಿನಲ್ಲಿ ಸರ್ವೇ ನಂ:222 ರಲ್ಲಿ 3.35 ಎಕರೆ ಜಮೀನು ನಗರಸಭೆಯವರು ಘನತ್ಯಾಜ್ಯ ವಸ್ತುಗಳ ನಿರ್ವಹಣಾ ಘಟಕ ಸ್ಥಾಪಿಸುವಾಗ ಕೈತಪ್ಪಿನಿಂದ ಸರ್ವೇ ಕಾರ್ಯದಲ್ಲಿ ಒತ್ತುವರಿಯಾಗಿತ್ತು.  ಇದನ್ನು ಪ್ರಶ್ನಿಸಿ ಪುಟ್ಟಮಾದಯ್ಯ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರು ಪರಿಶೀಲಿಸಿದ ಲೋಕಾಯುಕ್ತರು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.

ಜಿಲ್ಲಾಧಿಕಾರಿಗಳವರ ಆದೇಶದಂತೆ ನಂಜನಗೂಡು ನಗರಸಭೆಯ ಚುನಾಯಿತ ಆಡಳಿತ ಮಂಡಳಿ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಿ ನಂತರ ಜಿಲ್ಲಾಧಿಕಾರಿ ಜಿಲ್ಲಾ ಸಮಿತಿಯಲ್ಲಿ ಈ ಜಮೀನಿಗೆ ದರ ನಿಗದಿಪಡಿಸಿ ಆಡಳಿತಾತ್ಮಕ ಮಂಜೂರಾತಿಯನ್ನು ದಿನಾಂಕ: 31.07.2025ರಂದು ನೀಡಿದ್ದರು. ಇದೀಗ ನಂಜನಗೂಡು ನಗರಸಭಾ ವತಿಯಿಂದ ಇದರ ಖರೀದಿ ಬಾಬು ಒಟ್ಟು ಮೌಲ್ಯ ರೂ.1,60,82,242/- ಗಳ ಚೆಕ್ ಅನ್ನು ಇಂದು ಕೆ. ಪುಟ್ಟಮಾದಯ್ಯ ಅವರಿಗೆ ವಿತರಿಸಲಾಗಿದೆ.vtu

Key words: Land encroachment, Rs. 1.60 crore, compensation cheque, distributed, Mysore

The post ಜಮೀನು ಒತ್ತುವರಿ: ಮಾಲೀಕರಿಗೆ 1.60 ಕೋಟಿ ರೂ. ಪರಿಹಾರ ಚೆಕ್ ವಿತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...