15
April, 2026

A News 365Times Venture

15
Wednesday
April, 2026

A News 365Times Venture

ಶೈಕ್ಷಣಿಕ ಕ್ಷೇತ್ರದ ಚಟುವಟಿಕೆ ವೀಕ್ಷಣೆಗೆ ಇತರೆ ಇಲಾಖೆ ಅಧಿಕಾರಿಗಳ ನಿಯುಕ್ತಿ ಬೇಡ-MLC ಕೆ.ವಿವೇಕಾನಂದ ಪತ್ರ

Date:

 

ಮೈಸೂರು,ಆಗಸ್ಟ್,7,2025 (www.justkannada.in):  ಶೈಕ್ಷಣಿಕ ಕ್ಷೇತ್ರದ ಚಟುವಟಿಕೆಗಳನ್ನು ವೀಕ್ಷಿಸಲು ಇತರೆ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯುಕ್ತಿಗೊಳಿಸಿರುವ ಕ್ರಮ ಸರಿಯಲ್ಲ. ಈ  ಆದೇಶವನ್ನು ಹಿಂಪಡೆಯಿರಿ ಎಂದು ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಆಗ್ರಹಿಸಿದ್ದಾರೆ.

ಈ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿ(ಶಾಲಾ ಶಿಕ್ಷಣ ಇಲಾಖೆ) ಅವರಿಗೆ ಪತ್ರ ಬರೆದಿರುವ ಎಂಎಲ್ ಸಿ ವಿವೇಕಾನಂದ, ಶೈಕ್ಷಣಿಕ ಕೇತ್ರ ಅಭಿವೃದ್ಧಿ ದೃಷ್ಟಿಯಿಂದ ಹೊಸ ಹೊಸ ಆಲೋಚನೆಗಳನ್ನು ಅನುಷ್ಠಾನಗೊಳಿಸಲು ಹಲವು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವುದು ಸರಿಯಷ್ಟೇ. ಅದರಲ್ಲಿ ಕೆಲವು ಆಲೋಚನೆಗಳಿಗೆ ನಮ್ಮ ಸಮ್ಮತಿ ಇದೆ. ತಮ್ಮ ಇಲಾಖೆಯ ಹೊಸ ಆಲೋಚನೆಗಳನ್ನು ಅನುಷ್ಟಾನ ಮಾಡುವ ಮೊದಲು ಶಿಕ್ಷಣ ತಜ್ಞರ, ಶಿಕ್ಷಕರ ಕ್ಷೇತ್ರದ, ಪದವೀಧರ ಕ್ಷೇತ್ರದ ಶಾಸಕರುಗಳ, ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳ ಸಭೆ ಕರೆದು ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿ ಶಿಕ್ಷಕ ಸ್ನೇಹಿ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಈ ಮೊದಲು ಹಲವು ಬಾರಿ ತಮಗೆ ಖುದ್ದು ಸಿ ಪತ್ರದ ಮೂಲಕ ಕೋರಲಾಗಿತ್ತು.

ಆದರೂ ಇಲಾಖೆಯು ಈ ರೀತಿಯ ಸಭೆಯನ್ನು ಕರೆಯದೆ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಶೈಕ್ಷಣಿಕ ಕೇತ್ರದ ಹಿತ ದೃಷ್ಟಿಯಿಂದ ಸರಿಯಲ್ಲವೆಂದು ನನ್ನ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

ತಾವುಗಳು ಉಲ್ಲೇಖಿತ ಆದೇಶದಲ್ಲಿ ಶಾಲೆಯ, ಮುಖ್ಯ ಶಿಕ್ಷಕರ-ಸಹಶಿಕ್ಷಕರ ಕಾರ್ಯಚಟುವಟಿಕೆಗಳ ವೀಕ್ಷಣೆಗೆ ಇತರೆ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನಿಯುಕ್ತಗೊಳಿಸಿರುವುದು ಸರಿಯಾದ ಕ್ರಮವಲ್ಲ, ಏಕೆಂದರೆ ಇದರಿಂದ ಶಿಕ್ಷಕರ ಮನೋಸ್ಥೆರ್ಯ ಕುಗ್ಗಿಸಿದಂತಾಗುತ್ತದೆ. ಅಲ್ಲದೆ ಇತರೆ ಇಲಾಖೆಯ ನೋಡಲ್ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯ ಕಾರ್ಯವ್ಯಾಪ್ತಿ ಗೊತ್ತಿರುವುದಿಲ್ಲ.  ಆಗ ಇವರುಗಳ ನಡುವೆ ಮನಸ್ತಾಪವಾಗುವ ಸಂಭವ ಹೆಚ್ಚಿರುತ್ತದೆ. ತಮ್ಮ ಇಲಾಖೆಯಲ್ಲಿಯೇ ವಿವಿಧ ಸ್ತರದ ಶಿಕ್ಷಣಾಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು ಇರುವಾಗ ಇತರೆ ಇಲಾಖೆಯ ಅಧಿಕಾರಿಗಳನ್ನು ನೋಡಲ್‌ಗಳನ್ನಾಗಿ ನಿಯುಕ್ತಿಗೊಳಿಸಿರುವುದು ಸರಿಯಾದ ಕ್ರಮವಲ್ಲವೆಂದು ಮತ್ತೊಮ್ಮೆ ತಮಗೆ ಈ ಮೂಲಕ ತಿಳಿಸಿ. ಈ ಉಲ್ಲೇಖಿತ ಆದೇಶವನ್ನು ಮಾರ್ಪಾಡು ಮಾಡಿ ಅನುಷ್ಟಾನ ಗೊಳಿಸುವಂತೆ  ಮನವಿ ಮಾಡುವುದಾಗಿ ಪತ್ರದಲ್ಲಿ ವಿವೇಕಾನಂದ ತಿಳಿಸಿದ್ದಾರೆ.

Key words: other department, officials , activities , educational sector, MLC Vivekananda

The post ಶೈಕ್ಷಣಿಕ ಕ್ಷೇತ್ರದ ಚಟುವಟಿಕೆ ವೀಕ್ಷಣೆಗೆ ಇತರೆ ಇಲಾಖೆ ಅಧಿಕಾರಿಗಳ ನಿಯುಕ್ತಿ ಬೇಡ-MLC ಕೆ.ವಿವೇಕಾನಂದ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು, ಏಪ್ರಿಲ್,14,2026 (www.justkannada.in): ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್...

ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಸರಿಯಾಗಿ ಅರ್ಥ ಮಾಡಿಕೊಂಡರೇ ಸಮ ಸಮಾಜ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು , ಏಪ್ರಿಲ್, 15,2026 (www.justkannada.in):  ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು...

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ...

ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ...