25
August, 2026

A News 365Times Venture

25
Tuesday
August, 2026

A News 365Times Venture

ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ

Date:

ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟ ದೇವಾಲಯದ ಅರ್ಚಕ  ದೇವಪ್ರಸಾದ್ ದೀಕ್ಷಿತ್  ಅವರ  ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.

ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್ ಮಗ ಸಿದ್ದಾಂತ್  ಎಂಬಾತ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ದೇವಪ್ರಸಾದ್ ದೀಕ್ಷಿತ್  ಅವರ ಕುಟುಂಬ ಮೈಸೂರಿನ‌ ಸಿದ್ದಾರ್ಥ ನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು,  ಅದೇ ಬಡಾವಣೆಯಲ್ಲಿ ಪ್ರೊ. ಸಂತೋಷ್ ಕುಟುಂಬ ಸಹ ಇದೆ.

ಈ ಮಧ್ಯೆ ಸಿದ್ದಾಂತ್  ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ಏಕಾಏಕಿ ದೇವಪ್ರಸಾದ್ ದೀಕ್ಷಿತ್ ಅವರ ಮನೆಗೆ ನುಗ್ಗಿ ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ಕೊಡದಿದ್ದಾಗ ದೇವಪ್ರಸಾದ್ ದೀಕ್ಷಿತ್ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದು, ಆ ವೇಳೆಗೆ ಮನೆಗೆ ಬಂದ ದೇವಪ್ರಸಾದ್ ದೀಕ್ಷಿತ್ ಮಗ ಸುದೇವ್ ನೆರೆಹೊರೆಯವರ ಸಹಾಯ ಪಡೆದು ಸಿದ್ದಾಂತ್ ನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಮಗನ ಹುಚ್ಚಾಟದ ವಿಚಾರ ಗೊತ್ತಾಗಿ ಪ್ರೊ. ಸಂತೋಷ್ ಪತ್ನಿ ಹಾಗೂ ಸಿದ್ದಾಂತ್ ತಾಯಿಯು  ದೀಕ್ಷಿತ್ ರ ಮನೆಗೆ ಬಂದು ಗೋಳಾಡಿದ್ದಾರೆ. ಸಿದ್ದಾಂತ್ ತಾಯಿಯ ಗೋಳಾಟ ಕಂಡು ಮರುಗಿದ ದೇವ ಪ್ರಸಾದ್ ಕುಟುಂಬ ಫೊಲೀಸರಿಗೆ ದೂರು ಕೊಡಲು ಹಿಂದೇಟು ಹಾಕಿದ್ದಾರೆ.

Key words: Drug addict, youth, Attack, priests, Chamundi Hills

The post ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...