26
August, 2026

A News 365Times Venture

26
Wednesday
August, 2026

A News 365Times Venture

ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ

Date:

ಬೆಂಗಳೂರು ಗ್ರಾಮಾಂತರ ಆಗಸ್ಟ್,14,2025 (www.justkannada.in): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲದೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿದೇಶಿ ಅಧ್ಯಯನ ಮೇಳವನ್ನು ಮೊದಲ ಬಾರಿಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ.

ಆಗಸ್ಟ್ 17 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಬೆಂಗಳೂರು ನಗರದ ಲಲಿತ್ ಅಶೋಕ ಹೋಟೆಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶಕ್ಕಾಗಿ  http://studyabroad.ksdckarnataka.com ನೋಂದಾಯಿಸಿಕೊಳ್ಳಬಹುದು.

ಉನ್ನತ ಶಿಕ್ಷಣ ಪಡೆಯಲು ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವವರಿಗೆ ಪ್ರೋತ್ಸಾಹ ಧನವನ್ನು ನೀಡಿ ಜೊತೆಗೆ ಉಚಿತ ವಿಮಾನ ಟಿಕೆಟ್ ಸೌಲಭ್ಯ ನೀಡಲಾಗುತ್ತದೆ.

ಎಕ್ಸ್ಪೋ ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ನೇರ ಸಂವಾದ, ವಿದ್ಯಾರ್ಥಿ ವೇತನ ಮತ್ತು ಅರ್ಹತಾ ಮೌಲ್ಯಮಾಪನ, ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯ ಮತ್ತು ಇತರೆ ವಿಷಯಗಳ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ. ಇದರಲ್ಲಿ 10ಕ್ಕೂ ಹೆಚ್ಚು ದೇಶಗಳು, 50ಕ್ಕೂ ಅಧಿಕ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುತ್ತವೆ.

ಹೆಚ್ಚಿನ ಮಾಹಿತಿಗಾಗಿ 7338674791, 7338674792, 7338674794,73386 74798 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Special ,Study, Abroad Fair, Bangalore

The post ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...