16
February, 2026

A News 365Times Venture

16
Monday
February, 2026

A News 365Times Venture

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

Date:

ಬೆಂಗಳೂರು, ಫೆಬ್ರವರಿ ,16,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ  ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್  ತೀರ್ಪು ನೀಡಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದ್ದು, ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಲು ಸೂಚನೆ ನೀಡಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು  ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ ಶಾಸಕ ಸುಬ್ಬಾರೆಡ್ಡಿ ಸಹ ಮುನಿರಾಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಅದನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದ್ದರು. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಕೋರ್ಟ್, ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದರೆ, ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.

Key words: High Court, invalidates, Congress MLA

The post ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ...

ವಸೂಲಿಗಿಳಿದಿರುವ ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ- ಶಾಸಕ ಯತ್ನಾಳ್

ವಿಜಯಪುರ,ಫೆಬ್ರವರಿ,16,2026 (www.justkannada.in):  ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಸೂಲಿಗಿಳಿದಿದ್ದು ಯತೀಂದ್ರಗೆ ತರಬೇತಿ...

ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಿ- FKCCI ಅಧ್ಯಕ್ಷೆ ಉಮಾ ರೆಡ್ಡಿ

ಬೆಂಗಳೂರು,ಫೆಬ್ರವರಿ,16,2026 (www.justkannada.in): ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ವಿಶೇಷ...

17 ಬಾರಿ ಬಜೆಟ್ ಮಂಡಿಸಿದ ಸಿಎಂಗೆ ಈಗ ಪ್ರವಾಸ ಬೇಕಾ? ಮಾಜಿ ಶಾಸಕ ಸಾ.ರಾ ಮಹೇಶ್ ಕಿಡಿ

ಮೈಸೂರು,ಫೆಬ್ರವರಿ,16,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ವೇಳೆಯೇ ಕಾಂಗ್ರೆಸ್...