9
March, 2026

A News 365Times Venture

9
Monday
March, 2026

A News 365Times Venture

ಮೈಸೂರು ಕೆ.ಆರ್ ಆಸ್ಪತ್ರೆಗೆ 100 ICU ಬೆಡ್ ಗಳ ಮಂಜೂರಿಗೆ MLC  ಕೆ.ಶಿವಕುಮಾರ್ ಆಗ್ರಹ

Date:

ಬೆಂಗಳೂರು,ಮಾರ್ಚ್,9,2026 (www.justkannada.in):  ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚಲುವಾಂಬ ಆಸ್ಪತ್ರೆಗೆ 100 ಐಸಿಯು ಬೆಡ್ ಗಳನ್ನ ಮಂಜೂರು ಮಾಡುವಂತೆ ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಆಗ್ರಹಿಸಿದರು.

ಕೆಆರ್ ಆಸ್ಪತ್ರೆ, ಚಲುವಾಂಬ ಆಸ್ಪತ್ರೆಗೆ ಐಸಿಯು ಬೆಡ್ ಗಳು ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಇಂದು ವಿಧಾನಪರಿಷತ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಎಂಎಲ್ ಸಿ ಕೆ.ಶಿವಕುಮಾರ್ ಪ್ರಶ್ನಿಸಿದರು.

ಕೆ. ಆರ್ ಆಸ್ಪತ್ರೆಯಲ್ಲಿ ಖಾಲಿರುವ 117 ಪೋಸ್ಟ್ ಗಳನ್ನ ಯಾವಾಗ ತುಂಬುತ್ತಿದ್ದೀರಿ?  ಎಂಬ ಕೆ.ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್,  ಒಳ ಮೀಸಲಾತಿ ಗೊಂದಲ ಹಿನ್ನೆಲೆ ನೇಮಕಾತಿ ತಡೆ ಹಿಡಿಯಲಾಗಿತ್ತು ಸಚಿವ ಸಂಫುಟ ಸಭೆಯಲ್ಲಿ ನೇಮಕಾತಿಗಳಿಗೆ ನಿರ್ಧರಿಸಲಾಗಿದೆ. ಶೀಘ್ರದಲ್ಲೇ 117 ಪೋಸ್ಟ್ ಗಳನ್ನ ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು.

ಕೆಆರ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಬೆಡ್ ಗಳ ಕೊರತೆ ಇದೆ ಎಂದು ಹೇಳಿದ್ದಾರೆ. ಕೆಆರ್ ಆಸ್ಪತ್ರೆಯಲ್ಲಿ ಎಷ್ಟು ಸಾಮರ್ಥವಿದೆಯೋ ಅಷ್ಟು ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಿದ್ದೇವೆ. ರೋಗಿಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಬೇರೆ ಬೇರೆ ಕಡೆಗಳಲ್ಲೂ ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಟ್ರಾಮಾ ಸೆಂಟರ್,  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲೂ ಕೂಡ ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರಿಸಿದರು.

ಹಾಗೆಯೇ  ಐಸಿಯು ಕೊಟ್ಟರೆ ಸಾಲದು ಸೌಲಭ್ಯಗಳನ್ನ ಕೊಡಬೇಕು. ಹಾಗೆಯೇ ಚಲುವಾಂಬ ಆಸ್ಪತ್ರೆಯಲ್ಲಿ ಒಂದೇ ಬೆಡ್ ನಲ್ಲಿ ಎರಡು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಕೆ.ಆರ್ ಆಸ್ಪತ್ರೆ ಮತ್ತು ಚಲುವಾಂಬ ಆಸ್ಪತ್ರೆಗೆ 100 ಐಸಿಯು ಬೆಡ್ ಗಳನ್ನ  ಮಂಜೂರು ಮಾಡಬೇಕು ಎಂದು ಕೆ.ಶಿವಕುಮಾರ್ ಮನವಿ ಮಾಡಿದರು.

ಸಚಿವ ಶರಣಪ್ರಕಾಶ್ ಪಾಟೀಲ್ ಉತ್ತರಿಸಿ,  ಡಯಾಲಿಸಿಸ್ ಸೆಂಟರ್ ಗಳ ಬಗ್ಗೆ  ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಇನ್ಸ್ ಟಿಟ್ಯೂಟ್ ಆಫ್ ನೆಫ್ರಾಲಜಿ ಬ್ರಾಂಚ್  ಮಾಡಲಾಗುತ್ತಿದೆ  . 100 ಐಸಿಯು ಬೆಡ್ ಗಳಿಗೆ ಮನವಿ ಮಾಡಿದ್ದಾರೆ ಅದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ  ಎಂದು ತಿಳಿಸಿದರು.

Key words: MLC, K. Shivakumar, 100 ICU beds, Mysore, KR Hospital

The post ಮೈಸೂರು ಕೆ.ಆರ್ ಆಸ್ಪತ್ರೆಗೆ 100 ICU ಬೆಡ್ ಗಳ ಮಂಜೂರಿಗೆ MLC  ಕೆ.ಶಿವಕುಮಾರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು 40...

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್...

ಈವರೆಗೆ ಇರಾನ್ ನಿಂದ 67 ಸಾವಿರ ಭಾರತೀಯರನ್ನ ಕರೆ ತಂದಿದ್ದೇವೆ –ಕೇಂದ್ರ ಸಚಿವ ಜೈ ಶಂಕರ್

ನವದೆಹಲಿ,ಮಾರ್ಚ್,9,2026 (www.justkannada.in):  ಇರಾನ್ –ಇಸ್ರೇಲ್ ಯುದ್ದ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿದ್ದ...

MDA ವಿಶೇಷ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ: ಸರ್ಕಾರದಿಂದ ಮತ್ತೆ ಸೂಚನೆ

  ಮೈಸೂರು, ಮಾ.೦೮,೨೦೨೬ : ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಮೈಸೂರು ಅಭಿವೃದ್ಧಿ...