1
May, 2026

A News 365Times Venture

1
Friday
May, 2026

A News 365Times Venture

ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ.

Date:

ಮೈಸೂರು,ಫೆಬ್ರವರಿ,19,2025 (www.justkannada.in): ಅವಹೇಳನಕಾರಿ ಪೋಸ್ಟ್ ಮತ್ತು ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಫೆಬ್ರವರಿ 24 ರಂದು ಮೈಸೂರು ಜನಜಾಗೃತಿ ಸಮಿತಿ ವತಿಯಿಂದ ಜನಾಂದೋಲನ ಜಾಥಾ ಮತ್ತು ಮೌನಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಗನ್‌ಹೌಸ್‌ ನ ಬಳಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೌನ ಪ್ರತಿಭಟನೆ ನಡೆಸಿ, ಸಮಾರೋಪ ಸಮಾವೇಶವನ್ನು ಮಾಡಲು  ತೀರ್ಮಾನಿಸಲಾಗಿದೆ ಎಂದು ಮೈಸೂರು ಜನಜಾಗೃತಿ ಸಮಿತಿ ತಿಳಿಸಿದೆ.

ಘಟನೆ ನಡೆದು 10 ದಿನಗಳಾದರೂ, ಎಲ್ಲವೂ ಶಾಂತಿಯುತವಾಗಿದ್ದರೂ, ಕೆಲ ಕಿಡಿಗೇಡಿಗಳು ಮತ್ತೊಮ್ಮೆ ಕಿಡಿ ಹಚ್ಚಲು ಸಂಚು ರೂಪಿಸುತ್ತಿದ್ದಾರೆ. ಈ ಕಿಡಿಗೇಡಿಗಳ ಉದ್ದೇಶ ಹಿಂದೂ ಮುಸ್ಲಿಂರವರಿಗೆ ಜಗಳ ತಂದಿಡಬೇಕು ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಆದ್ದರಿಂದ ಮೈಸೂರಿನ ಜನರು ಶಾಂತಿಯನ್ನ ಬಯಸುತ್ತಾರೆ ಮತ್ತು ಸರ್ಕಾರ ಮತ್ತು ಕಾನೂನು ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುತ್ತಾರೆ ಎಂದು ನಿರೂಪಿಸಲು ಈ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಹೆಚ್ಚಿನ ಜನರು ಭಾಗವಹಿಸಿ ಶಾಂತಿ ಮೆರವಣಿಗೆ ಯಶಸ್ವಿಗೊಳಿಸುವಂತೆ ಮೈಸೂರು ಜನಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

Key words: Uadayagiri roit case, Janandola rally , Mysore

The post ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...