ನವದೆಹಲಿ,ಮಾರ್ಚ್,18,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು ಆದರೆ ಭೇಟಿಯಾಗಲು ಆಗಲಿಲ್ಲ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಕಚೇರಿಯಲ್ಲಿ ಆದಿವಾಸಿ ಕಾರ್ಯಕ್ರಮ ನಡೆಯಿತು. ನಾನು ಸತೀಶ್ ಜಾರಕಿಹೊಳಿ ಭಾಗವಹಿಸಿದ್ದ. ವು ಚುನಾವಣೆಯಲ್ಲಿ ಆದಿವಾಸಿಗಳು ಗೆಲ್ಲುವ ಬಗ್ಗೆ ಚರ್ಚೆ ಮಾಡಲಾಯಿತು. ದೆಹಲಿಯಲ್ಲಿ ಕುಳಿತು ಚರ್ಚೆ ಮಾಡಿದ್ರೆ ಆಗಲ್ಲ ರಾಜ್ಯಗಳಲ್ಲಿ ಚರ್ಚಿಸಿ ಎಂದು ಅದಿವಾಸಿ ಸಮುದಾಯದ ಸಭೆಯಲ್ಲಿ ಸಲಹೆ ನೀಡಿದ್ದೇವೆ. ರಾಜ್ಯಗಳಲ್ಲಿ ಸಮಾವೇಶ ಮಾಡಿ ಸಮಸ್ಯೆ ಆಲಿಸಿ ಎಂದು ಹೇಳಿದ್ದೇವೆ ಎಂದರು.
ಕರ್ನಾಟಕ ಸೇರಿದಂತೆ ದೇಶಾದ್ಯಂತ ಆದಿವಾಸಿಗಳ ಸಮಸ್ಯೆ ಬಗ್ಗೆ ಚರ್ಚೆಯಾಗಬೇಕು. ಆದಿವಾಸಿಗಳ ಒಕ್ಕಲೆಬ್ಬಿಸುವ ಕೆಲವಾಗುತ್ತಿದೆ ಪರಿಹಾರ ನೀಡಬೇಕು ಎಂದರು.
ರಾಹುಲ್ ಗಾಂಧಿ ಲೋಕಸಭೆಯಲ್ಲಿದ್ದರಿಂದ ತಡವಾಗಿ ಬರ್ತಾರೆ ಅಂತಿತ್ತು. ಯುಗಾದಿ ಹಬ್ಬ ಇರುವ ಕಾರಣ ನಾವು ಊರಿಗೆ ಹೋಗಬೇಕು. ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು ಆದರೆ ಆಗಲಿಲ್ಲ ಎಂದು ರಾಜಣ್ಣ ತಿಳಿಸಿದರು.
Key words: meet, Rahul Gandhi, Former Minister, KN Rajanna
The post ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




