25
May, 2026

A News 365Times Venture

25
Monday
May, 2026

A News 365Times Venture

ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ

Date:

ಬೆಂಗಳೂರು,ಏಪ್ರಿಲ್,1,2026 (www.justkannada.in):  ಆಲಮಟ್ಟಿ-ವಂಡಾಳ್ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ.ಸೋಮಣ್ಣ ಇಬ್ಬರಿಗೂ ಪತ್ರ ಬರೆದಿದ್ದಾರೆ.

ಇಬ್ಬರು ಕೇಂದ್ರ ಸಚಿವರಿಗೆ ತಮ್ಮ ಪತ್ರ ರವಾನಿಸಿರುವ ಸಚಿವ ಎಂ.ಬಿ ಪಾಟೀಲ್,  ಗದಗ-ಹೊಟಗಿ ಹಳಿ ದ್ವಿಪಥೀಕರಣ ಯೋಜನೆಯ ಭಾಗವಾಗಿ ಆಲಮಟ್ಟಿ-ವಂಡಾಳ್ ನಡುವಿನ‌ ಕಾಮಗಾರಿ ಈಗ ಮುಗಿದಿದೆ. ಇದು ಮುಗಿದರೆ ಬೆಂಗಳೂರು-ವಿಜಯಪುರ ನಡುವೆ ಎಕ್ಸ್‌ ಪ್ರೆಸ್‌ ರೈಲು ಆರಂಭಿಸಬಹುದು ಎಂದು ಹಿಂದಿನ ಭೇಟಿಯಲ್ಲಿ ಹೇಳಿದ್ದಿರಿ. ಈಗ ಇದಕ್ಕೆ ಆದ್ಯತೆ ಕೊಡಬೇಕು. ಶೈಕ್ಷಣಿಕ, ವೈದ್ಯಕೀಯ, ಆಡಳಿತಾತ್ಮಕ, ವಾಣಿಜ್ಯ ವಹಿವಾಟು ಇತ್ಯಾದಿಗಳಿಗೆ ನಿತ್ಯವೂ ಬೆಂಗಳೂರಿಗೆ ಬರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಗಮನ ಸೆಳೆದಿದ್ದಾರೆ.

ಇದೇ ರೀತಿಯಲ್ಲಿ ಈಗ ಎರಡೂ ನಗರಗಳ ನಡುವೆ ರೈಲು ಪ್ರಯಾಣಕ್ಕೆ 15 ಗಂಟೆಗಳ ಕಾಲ ಹಿಡಿಯುತ್ತಿದೆ. ಇದು ಅನನುಕೂಲಕ್ಕೆ ಕಾರಣವಾಗಿದೆ. ಇದನ್ನು 10 ಗಂಟೆಗಳಿಗೆ ಇಳಿಸಬೇಕಾದ ಜರೂರಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳಿಗೆ ಹುಬ್ಬಳ್ಳಿಯ ತನಕ ನಿಗದಿತ ನಿಲುಗಡೆ ನೀಡುವುದು ಮತ್ತು ನಂತರ ವಿಜಯಪುರಕ್ಕೆ ಸಾಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಅವರು ಕೋರಿದ್ದಾರೆ.

Key words: Demand,  Bengaluru-Bijayapura, Express train, Minister, M.B. Patil, letter

The post ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...