ಬೆಂಗಳೂರು,ಏಪ್ರಿಲ್,8,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಿಸುತ್ತಿತ್ತು. ಇದೀಗ ಆಟೋ ಚಾಲಕರು ಆತಂಕಪಡುವ ಅವಶ್ಯಕತೆ ಇಲ್ಲ. ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. IOCL, BPC, HPC ಕಂಪನಿಗಳಿಂದ ಗ್ಯಾಸ್ ಪೂರೈಕೆ ನಡೆಯುತ್ತಿದೆ. ಏಪ್ರಿಲ್ 2ರಿಂದ ಏಪ್ರಿಲ್ 6ರವರೆಗೆ ದಿನನಿತ್ಯ ಸರಬರಾಜು ಆಗುತ್ತಿದೆ. ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್ ವರೆಗೂ ಪೂರೈಕೆ ಮಾಡಲಾಗಿದೆ. ಏಪ್ರಿಲ್ 5ರಂದು ಅತಿ ಹೆಚ್ಚು 94.11 MT ಸರಬರಾಜು ಮಾಡಲಾಗಿದೆ. ಆಟೋ ಚಾಲಕರು ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದೆ.
ಇನ್ನು ಎಲ್ಪಿಜಿ ಪೂರೈಕೆ ವ್ಯವಸ್ಥೆಯನ್ನು ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಆಟೋ ಚಾಲಕರಿಗೆ ಆತಂಕ ಬೇಡ, ಪೂರೈಕೆ ಮೇಲೆ ಸರ್ಕಾರದ ನಿಗಾ ಇದೆ. ರಾಜ್ಯದಲ್ಲಿನ ಆಟೋ ಮಾಲೀಕರು ಮತ್ತು ಚಾಲಕರುಗಳು ಆತಂಕ ಪಡದೇ ಮತ್ತು ಯಾವುದೇ ವದಂತಿಗಳಿಗೆ ಕಿವಿ ಕೊಡದೇ ಸಹಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
Key words: LPG Gas, Auto drivers, government, statement
The post ‘ಗ್ಯಾಸ್’ ಅಭಾವ: ಆಟೋ ಚಾಲಕರಿಗೆ ಆತಂಕ ಬೇಡ -ಸರ್ಕಾರದಿಂದ ಪ್ರಕರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




