22
April, 2026

A News 365Times Venture

22
Wednesday
April, 2026

A News 365Times Venture

ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆಯಿದು?

Date:

ವಿಜಯಪುರ,ಏಪ್ರಿಲ್,8,2026 (www.justkannada.in):  ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್.   ಅದು ಸತ್ಯವೋ ಅಸತ್ಯವೋ  ಅನ್ನೋದರ ಬಗ್ಗೆ ಸೂಕ್ತ ತನಿಖೆಯಾಗಲಿ. ಈ ಬಗ್ಗೆ ಸೂಕ್ತ ತನಿಖೆ  ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ನಮಗೂ ಇದಕ್ಕೂ ಸಂಬಂಧ ಇಲ್ಲ ಹೀಗಾಗಿ ಪ್ರತಿಕ್ರಿಯೆ ನೀಡಲ್ಲ ಎಂದರು.

ಬಿಜೆಪಿ ಆರ್ ಎಸ್ ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್,  ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಇರುತ್ತೆ. ಬೆಂಕಿ ಪಟ್ಟಣ ಇಟ್ಟುಕೊಂಡು ಬಿಜೆಪಿಯವರು ಓಡಾಡುತ್ತಿದ್ದಾರೆ. ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡ್ತಾರೆ.  ಬಿಜೆಪಿಯವರು ದೇಶಕ್ಕಾಗಿ ಯಾವುದೇ ಹೋರಾಟ ಮಾಡಿಲ್ಲ ಎಂದರು.

ಇಂಡಿಯಾ ಗೇಟ್ ನಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರ ಹೆಸರಿದೆ. ಹೋರಾಟ ಮಾಡಿದ ಮುಸ್ಲೀಮರ ನೂರಾರು ಹೆಸರಿದೆ. ಬಿಜೆಪಿಯವರು ಬ್ರಿಟೀಷರ ಏಜೆಂಟ್ ಆಗಿದ್ದರು. ಈಗ ಬಿಜೆಪಿಯವರು ರಾಷ್ಟ್ರೀಯತೆ ಅನ್ನುತ್ತಿದ್ದಾರೆ. ವಿಷಕಾರಿ ನಿರ್ಮೂಲನೆ ಮಾಡಿ ಎಂಬರ್ಥದಲ್ಲಿ ಖರ್ಗೆ ಹೇಳಿದ್ದಾರೆ.  ಇದನ್ನು ಹೊಡೆದು ಕೊಲ್ಲಿ ಎಂದು ಹೇಳಿಲ್ಲ ಎಂದು ಎಂ.ಬಿ ಪಾಟೀಲ್ ಸ್ಪಷ್ಟಪಡಿಸಿದರು.

Key words:  Minister M.B. Patil, Sexual assault, allegations, against, Jaya Mrityunjaya Swamiji

The post ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆಯಿದು? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಜಮೀರ್ ಜೆಡಿಎಸ್ ಸೇರ್ತಾರಾ ಅನ್ನೋ ವಿಚಾರ: ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದ ನಿಖಿಲ್

ಬೆಂಗಳೂರು,ಏಪ್ರಿಲ್,22,2026 (www.justkannada.in): ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರುತ್ತಾರೆಯೇ...

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಕೊಡಗು,ಏಪ್ರಿಲ್,22,2026 (www.justkannada.in):  ಅಮೆರಿಕಾ ಮೂಲದ ಪ್ರವಾಸಿ ಮಹಿಳೆಯ ಮೇಲೆ ಹೋಮ್ಸ್‌ ಸ್ಟೇ...

ಪಹಲ್ಗಾಮ್ ದಾಳಿಗೆ ವರ್ಷ :  ಕಣಿವೆ ದುಃಖದಲ್ಲಿ, ಹೊಂದಾಣಿಕೆ ಮತ್ತು ಹೆಚ್ಚಿದ ಭದ್ರತೆ.!

  ಶ್ರೀನಗರ, ಏ.೨೧,೨೦೨೬: ಕಾಶ್ಮೀರದ ಶ್ರೀನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅಶಾಂತಿಯ ನಿಶ್ಶಬ್ದತೆ...

ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ- ಕೆ.ಎನ್ ರಾಜಣ್ಣ

ಬೆಂಗಳೂರು,ಏಪ್ರಿಲ್,21,2026 (www.justkannada.in):  ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಯಾಗುತ್ತದೆ ಎಂದು ಮಾಜಿ...