17
April, 2026

A News 365Times Venture

17
Friday
April, 2026

A News 365Times Venture

ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ

Date:

ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು ಕಾಣಿಸಿಕೊಂಡ ಘಟನೆ ಆತಂಕ ಹುಟ್ಟಿಸಿದರೂ, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಬಿಡಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಮೈಸೂರು ವಿಭಾಗದಿಂದ ನೀಡಿದ ಪತ್ರಿಕಾ ಪ್ರಕಟಣೆ ಪ್ರಕಾರ, ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಮಾಹಿತಿ ದೊರಕುತ್ತಿದ್ದಂತೆ ಅಧಿಕಾರಿಗಳು ಹಾಗೂ ಎಲ್.ಟಿ.ಎಫ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ, ಚಿರತೆಯು ಸುಮಾರು 2-3 ವರ್ಷ ವಯಸ್ಸಿನದ್ದಾಗಿದ್ದು, ಅದು ಚಾಮುಂಡಿ ಬೆಟ್ಟ ಅಥವಾ ವರಕೂಡು ಅರಣ್ಯ ಪ್ರದೇಶದಿಂದ ಬಂದಿರಬಹುದೆಂದು ಅಂದಾಜಿಸಲಾಗಿದೆ.

ಘಟನೆಯಿಂದ ಸಾರ್ವಜನಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ, ಪಶುವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಚಿರತೆ ಸಂಪೂರ್ಣ ಆರೋಗ್ಯವಾಗಿರುವುದು ದೃಢಪಟ್ಟಿದೆ.

ಎನ್.ಎಫ್.ಸಿ.ಎ ನಿಯಮಾವಳಿಗಳ ಪ್ರಕಾರ, ಚಿರತೆಯನ್ನು ಸುರಕ್ಷಿತವಾಗಿ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದ್ದು, ಸೆರೆಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Mysuru: A male leopard spotted inside a house in Siddarthanagar was safely captured by the Forest Department and released back into the wild. The 2–3 year old leopard is believed to have strayed from Chamundi Hills or nearby forest areas. No injuries or harm to the public were reported.

#Mysuru #LeopardRescue #ForestDepartment #Wildlife #Karnataka #BreakingNews

Key words: Mysuru, leopard, house, captured, Forest Department

The post ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್

ಮೈಸೂರು, ಏಪ್ರಿಲ್,17,2026 (www.justkannada.in(www.justkannada.in): ರಸಗೊಬ್ಬರ ಮಾರಾಟಗಾರರು ರೈತರು ಯುರಿಯಾ ಸೇರಿದಂತೆ  ಅಗತ್ಯ...

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ...

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ...