20
April, 2026

A News 365Times Venture

20
Monday
April, 2026

A News 365Times Venture

ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ- ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಏಪ್ರಿಲ್,20,2026 (www.justkannada.in): ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ. ವರ್ಣಾಶ್ರಮದ ವಿರುದ್ದ ವಚನ ಸಾಹಿತ್ಯ ಮೂಲಕ ಸಂದೇಶ ಸಾರಿದವರು ಬಸವೇಶ್ವರರು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ನುಡಿದರು.

ಇಂದು ಮೈಸೂರಿನಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಬಸವೇಶ್ವರರು ನಮಗೆ ದೊಡ್ಡ ಪ್ರೇರಣ ಶಕ್ತಿ.  ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕಿರಿಸಿ ನನಗಿಂತ ದೊಡ್ಡವಳಾದ ಅಕ್ಕನಿಗೆ ಜನಿವಾರ ಹಾಕುಲು ಹೇಳಿದರು.  ಆಗ ಆಕೆ ಹೆಣ್ಣೂ ಎಂದಾಗ ಲಿಂಗ ತಾರತಮ್ಯವನ್ನು ವಿರೋಧಿಸಿದರು ಸಾಮಾಜಿ ಚಳುವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದರು.  ಜನರಿಗೆ ಅರ್ಥವಾಗುವ ರೀತಿ ಹೋರಾಟ ಮಾಡಿದರು ಎಂದರು.

ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ  ಎಂದು ಸಿಎಂ ಘೋಷಿಸಿದ್ದಾರೆ. ಬುದ್ದ, ಬಸವ ಅಂಬೇಡ್ಕರ್, ಪೆರಿಯಾರ್, ಗಾಂಧಿ, ಪುಲೆ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಂಡು ಚರಿತ್ರೆ ನಿರ್ಮಿಸಿದರು.  800 ವರ್ಷಗಳ ಹಿಂದೆಯೇ ಅನುಭವ ಮಂಟಪ ನಿರ್ಮಿಸಿ ಅಲ್ಲಮ ಪ್ರಭು ಅವರನ್ನ ಅಧ್ಯಕ್ಷರನ್ನಾಗಿ ಮಾಡಿದರು ಈಗ ಮಹಿಳಾ  ಮೀಸಲಾತಿ ಬಿಲ್ ಮಂಡಿಸಿದ್ದಾರೆ. ಆದರೆ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತಂದು ಹೆಣ್ಣು ಮಕ್ಕಳಿಗೂ ಸಮಾನ ಹಕ್ಕು ನೀಡುವಂತೆ ಪ್ರತಿಪಾದಿಸಿದಾಗ ಅಂಬೇಡ್ಕರ್ ಗೆ ಸೋಲಾಗುವಂತೆ ಮಾಡಿದ್ದು ಮನುವಾದಿಗಳು. ಸಾಮಾಜಿಕ ತಳಹದಿಯ ಮೇಲೆ ಪ್ರಜಾಪ್ರಭುತ್ವ ನಿಂತಿದೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು.

Key words: Basavanna, created, equal society, Minister, H.C. Mahadevappa

The post ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್...

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್, 20,2026 (www.justkannada.in): ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು...

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ...

ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,20,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿಯ ಹಿಂದೆ ಯಾವುದೇ...