5
May, 2026

A News 365Times Venture

5
Tuesday
May, 2026

A News 365Times Venture

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

Date:

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ ಪಡೆಯುವ ಮೂಲಕ ಭರ್ಜರಿ ಜಯಸಾಧಿಸಿದ್ದು ಇತ್ತ ಟಿಎಂಸಿ ಸೋಲನ್ನ ಒಪ್ಪಿಕೊಳ್ಳಲು ಸಿಎಂ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.

ಹೌದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆದ್ದಿದೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ ಹೀಗಾಗಿ ರಾಜೀನಾಮೆ ನೀಡಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿದ್ದರೇ ರಾಜೀನಾಮೆ ನೀಡುತ್ತಿದ್ದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮಮತಾ ಬ್ಯಾನರ್ಜಿ, ನಾಣು  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡಲ್ಲ. ನನ್ನಿಂದ ಬಲವಂತವಾಗಿ ರಾಜೀನಾಮೆ ಪಡೆಯಲು ಆಗಲ್ಲ. ಟಿಎಂಸಿ ಸೋತಿಲ್ಲ  ನಾವು ಗೆಲ್ಲಬೇಕಾದ 100 ಕ್ಷೇತ್ರಗಳಲ್ಲಿ ಮತಗಳ್ಳತನವಾಗಿದೆ.  ನಾವು ಚುನಾವಣೆಯಲ್ಲಿ ಸೋತಿಲ್ಲ. ಆದರೆ ನಮ್ಮ ಗೆಲುವನ್ನ ಕಿತ್ತುಕೊಳ್ಳಲಾಗಿದೆ.   ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ವೋಟ್ ಚೋರಿ ಆಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಬಿಜೆಪಿಯ ಆಡಳಿತ ಮಾತ್ರ ಇರಬೇಕೆಂದು ಬಯಸುತ್ತಾರೆ. ಇಂತಹ ಅತ್ಯಾಚಾರಿ ಬಿಜೆಪಿ ಸರ್ಕಾರವನ್ನು ನಾನೆಂದು ನೋಡಿಲ್ಲ. ಚುನಾವಣಾ ಆಯೋಗ ಮಾರಾಟವಾಗಿದೆ. ವಾಮಮಾರ್ಗದ ಮೂಲಕ ಬಿಜೆಪಿ ಗೆದ್ದಿದೆ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

Key words: West Bengal, Mamata Banerjee, not resign, CM, Position

The post ‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ...

ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ- MLC ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮೇ,5,2026 (www.justkannada.in): ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ ಎಂದು  ವಿಧಾನಪರಿಷತ್...

ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ,5,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 06 ರಂದು...