14
May, 2026

A News 365Times Venture

14
Thursday
May, 2026

A News 365Times Venture

ನೀಟ್ ಮರುಪರೀಕ್ಷೆ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ- ಸಚಿವ ಮಧು ಬಂಗಾರಪ್ಪ

Date:

ಬೆಂಗಳೂರು, ಮೇ, 12,2026 (www.justkannada.in):  ಕೇಂದ್ರ ಸರ್ಕಾರವು ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿರುವ ಹಾಗೂ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ  ಎಸ್ ಮಧು ಬಂಗಾರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದಿದ್ದ ಲಕ್ಷಾಂತರ ಮಕ್ಕಳ ಮೇಲೆ ಈ ದಿಢೀರ್ ‘ಮರುಪರೀಕ್ಷೆ’ಯ ನಿರ್ಧಾರವು ಗದಾಪ್ರಹಾರದಂತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ನಾವು ಶಾಲಾ ಮಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರದ ಇಂತಹ ಬೇಜವಾಬ್ದಾರಿಯುತ ನಿರ್ಧಾರಗಳು ಮಕ್ಕಳನ್ನು ಮತ್ತು ಪೋಷಕರನ್ನು ಹತಾಶೆಯ ಕೂಪಕ್ಕೆ ತಳ್ಳುತ್ತಿವೆ,” ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ಆದ್ಯತೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿದ ಸಚಿವ ಮಧು ಬಂಗಾರಪ್ಪ, “ದೇಶದ ಜನರಿಗೆ ಮನೆಯಿಂದಲೇ ಕೆಲಸ ಮಾಡಿ (Work from Home) ಅಥವಾ ಸಾರ್ವಜನಿಕ ಸಾರಿಗೆ ಬಳಸಿ ಇಂಧನ ಉಳಿಸಿ ಎಂದು ದೊಡ್ಡ ದೊಡ್ಡ ಬುದ್ಧಿಮಾತುಗಳನ್ನು ಹೇಳುವ ಕೇಂದ್ರ ಸರ್ಕಾರಕ್ಕೆ, ಮೊದಲು ತನ್ನ ಮೂಲ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೇ? ದೇಶದ ಜನರಿಗೆ ಜೀವನಶೈಲಿಯ ಪಾಠ ಮಾಡುವ ಮೊದಲು, ಕನಿಷ್ಠ ಒಂದು ನೀಟ್ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಡೆಸುವ ಪ್ರಾಥಮಿಕ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೋರಲಿ,” ಎಂದು ಮಧು ಬಂಗಾರಪ್ಪ ಕಿಡಿಕಾರಿದರು.

ರಾಜ್ಯ ಬಿಜೆಪಿ ನಾಯಕರೇಕೆ ಮೌನ?

ಇದೇ ವೇಳೆ, ಈ ಗಂಭೀರ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರ ಮೌನವನ್ನೂ ಅವರು ಕಟುವಾಗಿ ಪ್ರಶ್ನಿಸಿದ ಸಚಿವ ಮಧು ಬಂಗಾರಪ್ಪ, “ರಾಜ್ಯದಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ರಾಷ್ಟ್ರೀಯ ಹಿತಾಸಕ್ತಿಯ ಬಗ್ಗೆ ಭಾಷಣ ಮಾಡುವ ಸ್ಥಳೀಯ ಬಿಜೆಪಿ ನಾಯಕರು, ಕೇಂದ್ರದ ಈ ಬೃಹತ್ ವೈಫಲ್ಯದ ಬಗ್ಗೆ ಈಗೇಕೆ ದನಿ ಎತ್ತುತ್ತಿಲ್ಲ? ಪ್ರಶ್ನೆಪತ್ರಿಕೆ ಸೋರಿಕೆಯಂತಹ ಹಗರಣಗಳು ಪದೇ ಪದೇ ಸರಣಿಯಂತೆ ನಡೆಯುತ್ತಿದ್ದರೂ, ಕೇಂದ್ರದ ಮೇಲೆ ಒತ್ತಡ ತರುವಲ್ಲಿ ಸ್ಥಳೀಯ ಬಿಜೆಪಿ ನಾಯಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದು ಕೇವಲ ಒಂದು ಪರೀಕ್ಷೆಯ ವಿಚಾರವಲ್ಲ, ಬದಲಾಗಿ ರಾಜ್ಯದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ,” ಎಂದು ಅವರು ಗುಡುಗಿದರು.

“ಕೇಂದ್ರ ಸರ್ಕಾರವು ಕೇವಲ ಸಿಬಿಐ ತನಿಖೆಗೆ ಆದೇಶಿಸಿ ಕೈ ತೊಳೆದುಕೊಂಡರೆ ಸಾಲದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಭದ್ರವಾದ ಹಾಗೂ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆಯೊಂದನ್ನು ರೂಪಿಸಬೇಕು. ಇಲ್ಲವಾದರೆ ಇಡೀ ಪರೀಕ್ಷಾ ಪದ್ಧತಿಯ ಮೇಲೆಯೇ ಜನಸಾಮಾನ್ಯರಿಗೆ ಇರುವ ನಂಬಿಕೆ ಸಂಪೂರ್ಣವಾಗಿ ನಾಶವಾಗಲಿದೆ,” ಎಂದು ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

Key words: NEET, re-examination, Minister, Madhu Bangarappa

The post ನೀಟ್ ಮರುಪರೀಕ್ಷೆ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ- ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...